ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ರಾಮಮಂದಿರದ ಮೇಲೆ ತಾವೇ ಬಾಂಬ್ ಹಾಕಿ, ಅದನ್ನು ಮುಸ್ಲಿಂ ಮೇಲೆ ಮೇಲೆ ಆರೋಪ ಹೊರಿಸಿ, ಹಿಂದೂಗಳ ಮತ ಒಟ್ಟುಗೂಡಿಸಿ ಮತ್ತೆ ಚುನಾವಣೆ ಗೆಲ್ಲುವ ಸಾಧ್ಯತೆ ಇದೆ. ಇಂತಹ ಕೆಲಸಕ್ಕೂ ಅವರು ಹೆಸೋದಿಲ್ಲ ಎಂದು ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಾಸಕ ಬಿ ಆರ್ ಪಾಟೀಲ್ ನೀಡಿರುವ ಹೇಳಿಕೆಯ ಈ ವಿಡಿಯೋ ಬಿಜೆಪಿ ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದೆ. ಹಿಂದೂ ಧರ್ಮದ ಬುನಾದಿಯನ್ನೇ ಪ್ರಶ್ನಿಸಲು ಹೊರಟ ಕಾಂಗ್ರೆಸ್ಸಿಗರು ಈಗಲೇ ರಾಮಮಂದಿರದ ಮೇಲೆ ಕಾಕದೃಷ್ಟಿ ಬೀರಿದ್ದಾರೆ.
ರಾಮಮಂದಿರವನ್ನೇ ಅಲುಗಾಡಿಸಿ ಹಿಂದೂ-ಮುಸ್ಲಿಂ ದಂಗೆಯೆಬ್ಬಿಸಿ ಅದನ್ನು ಸರ್ಕಾರದ ತಲೆಗೆ ಕಟ್ಟಲು ಕಾಂಗ್ರೆಸ್ ಈಗಾಗಲೇ ಸಜ್ಜಾಗಿರುವ ವಿಚಾರವನ್ನು ಸಚಿವರಾದ ಬಿ. ಆರ್. ಪಾಟೀಲರು ಬಾಯಿ ತಪ್ಪಿ ಹೇಳಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಹಿಂದೂ ಧರ್ಮದ ಬುನಾದಿಯನ್ನೇ ಪ್ರಶ್ನಿಸಲು ಹೊರಟ ಕಾಂಗ್ರೆಸ್ಸಿಗರು ಈಗಲೇ ರಾಮಮಂದಿರದ ಮೇಲೆ ಕಾಕದೃಷ್ಟಿ ಬೀರಿದ್ದಾರೆ.
ರಾಮಮಂದಿರವನ್ನೇ ಅಲುಗಾಡಿಸಿ ಹಿಂದೂ-ಮುಸ್ಲಿಂ ದಂಗೆಯೆಬ್ಬಿಸಿ ಅದನ್ನು ಸರ್ಕಾರದ ತಲೆಗೆ ಕಟ್ಟಲು @INCIndia ಈಗಾಗಲೇ ಸಜ್ಜಾಗಿರುವ ವಿಚಾರವನ್ನು ಸಚಿವರಾದ ಬಿ. ಆರ್. ಪಾಟೀಲರು ಬಾಯಿ ತಪ್ಪಿ ಹೇಳಿದ್ದಾರೆ. pic.twitter.com/YLwtVsvrH8
— BJP Karnataka (@BJP4Karnataka) September 25, 2023



