ಬೆಂಗಳೂರು: ಸೆ.30ರಂದು ದಾವಣಗೆರೆ ಸೇರಿದಂತೆ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರ್ಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು(ಸೆ.26) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ಮತ್ತು 30ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ.
ಬಿರುಗಾಳಿಯ ವೇಗ ಘಂಟೆಗೆ 30- 40 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ (ಸೆ. 27 ರ ಬೆಳಗ್ಗೆ ವರೆಗೆ ) ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸೆ.29ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.



