ದಾವಣಗೆರೆ: ಮನೆ ಕಳ್ಳತನ ಮಾಡಿದ್ದ ನಾಲ್ವರು ಅಂತರ್ ಜಿಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 8.16 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.
ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಹರ ನಗರದ ಕೇಶವ ನಗರ ಪಟೇಲ್ ಬಡಾವಣೆಯಲ್ಲಿ ಮನೆ ಕಳ್ಳತನವಾಗಿದ್ದರ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ 01) ಸುರೇಶ್ ಶಿಂಗ್ರೂರ್, 27 ವರ್ಷ, ಬೆಳಗಾವಿ ಜಿಲ್ಲೆ. 02) ದುರುಗಪ್ಪ, ಕುಂಚಿಕೊರವರ, ಬೆಳಗಾವಿ ಜಿಲೆ, 03) ನಾಗಪ್ಪ @ನಾಗ, 41 ವರ್ಷ, ದಾರವಾಡ ಜಿಲೆ, 04) ಸಂತೋಷ್ ಪವಾರ, 28 ವರ್ಷ, ಕೊಲ್ಲಾಪುರ ಇವರುಗಳನ್ನು ಹರಿಹರ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಹರಿಹರ ನಗರ ಪೊಲೀಸ್ ಠಾಣೆಯ ಒಂದು ಪ್ರಕರಣ ಹಾಗೂ ಗದಗ್ ಶಹರ ಪೊಲೀಸ್ ಠಾಣೆಯ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ 7,80,000/-ರೂ. ಬೆಲೆಯ 130 ಗ್ರಾಂ ಬಂಗಾರದ ಆಭರಣಗಳನ್ನು ಹಾಗೂ 31,500/-ರೂ ಬೆಲೆಯ ಒಟ್ಟು 435 ಗ್ರಾಂ ಬೆಳ್ಳಿ ಆಭರಣಗಳು ಹಾಗೂ 5000/-ರೂ ಬೆಲೆಯ ನಗದು ಹಣ ಒಟ್ಟು 8,16,500/-ರ ಮೌಲ್ಯದ
ಸತ್ತನ್ನು ವಶಪಡಿಸಿಕೊಂಡಿದ್ದಾರೆ.
ಕಳ್ಳತನ ಮಾಡಿದ ಆರೋಪಿತರನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್ ಬಿ ಬಸರಗಿಬರವರ ಹಾಗೂ ಡಿವೈಎಸ್ಪಿ ಬಸವರಾಜ ಬಿ.ಎಸ್, ಹರಿಹರ ಠಾಣೆಯ ಪಿ ಐ S.ದೇವಾನಂದ ಮಾರ್ಗದರ್ಶನದಲ್ಲಿ, ಪಿಎಸ್ ಐಗಳಾದ ಪ್ರವೀಣ ಕುಮಾರ, ಚಿದಾನಂದಪ್ಪ ಎಸ್.ಬಿ, ಮಂಜುನಾಥ ಕಲ್ಲೆದೇವರ ಹಾಗೂ ಸಿಬ್ಬಂದಿಗಳಾದ ಮಂಜುನಾಥ ಬಿ.ವಿ, ದೇವರಾಜ್ ಸೂರ್ವೆ, ಮಂಜುನಾಥ ಕಾತಮ್ಮನವರ, ಹನುಮಂತ ಗೋಪನಾಳ, ಮುರುಗೇಶ್, ಸಿದ್ಧರಾಜು, ರಾಘವೇಂದ್ರ, ಶಾಂತರಾಜ್, ನಾಗರಾಜ ಕುಂಬಾರ, ಅಕ್ತರ್, ವಿರೇಶ, ಅಡಿವೆಪ್ಪನವರ್ ಮಾರುತಿ ಅವರನ್ನೊಳಗೊಂಡ ತಂಡವು ಆರೋಪಿತರನ್ನು ಪತ್ತೆ ಮಾಡಿ ಮಾಲನ್ನು ವಶಪಡಿಸಿಕೊಂಡಿದೆ.
ಈ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ, ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.ವಿಶೇಷ ಸೂಚನೆ: ಸಾರ್ವಜನಿಕರು ತಮ್ಮ ಮನೆಗಳಿಗೆ ಬೀಗ ಹಾಕಿಕೊಂಡು ಬೇರೆ ಬೇರೆ ಊರುಗಳಿಗೆ ಹೋಗುವಾಗ ಮನೆಯಲ್ಲಿ, ಬೆಲೆಬಾಳುವ ವಸ್ತುಗಳನ್ನು ಬಿಟ್ಟು ಹೋಗಬಾರದು ಹಾಗೂ ಬೀಗ ಹಾಕಿಕೊಂಡು ಹೋಗುವ ಬಗ್ಗೆ ಮುಂಚಿತವಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ನಿಮ್ಮ ಮನೆಗಳ ಕಡೆಗೆ ಹೆಚ್ಚಿನ ಗಸ್ತು ಕರ್ತವ ನಿರ್ವಹಿಸಲಾಗುವುದು.



