ಡಿವಿಜಿ ಸುದ್ದಿ, ಯಾದಗಿರಿ: ಇಂದಿನ ಕಾಂಗ್ರೆಸ್ ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಆಗಿ ಉಳಿದಿಲ್ಲ. ಬದಲಾಗಿ ಪಾಕಿಸ್ತಾನ ರಾಷ್ಟ್ರೀಯ ಕಾಂಗ್ರೆಸ್ ಆಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವ್ಯಂಗ್ಯವಾಡಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ದೇಶ ಬೇಕಾಗಿಲ್ಲ. ತಮ್ಮ ವೋಟ್ ಬ್ಯಾಂಕ್ ಗಾಗಿ ದೇಶ ಮಾರಾಟ ಮಾಡಿದರೂ, ಪರವಾಗಿಲ್ಲ ಎನ್ನುವ ಲೆಕ್ಕಚಾರದಲ್ಲಿವೆ. ಎಸ್ಡಿಪಿಐ ಮತ್ತು ಐಎಸ್ಐ ಸಂಘಟನೆಗಳು ದೇಶ ಸೇವೆ ಮಾಡಲ್ಲ. ಈ ಎರಡು ಸಂಘಟನೆಗಳು ಪಾಕಿಸ್ತಾನದ ಏಜೆಂಟ್ ಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ತಪ್ಪು ಮಾಡಿದವರು ಕ್ಷಮೆ ಕೋರುವುದು ಧರ್ಮ. ಆ ಕೆಲಸವನ್ನು ನಿರಾಣಿ ಮಾಡಿದ್ದಾರೆ. ಮಠಾಧೀಶರು ರಾಜಕೀಯದಲ್ಲಿ ಒತ್ತಡ ಹಾಕುವುದು ಸರಿಯಲ್ಲ. ಸ್ವಾಮೀಜಿಗಳದ್ದು ಧರ್ಮದ ಕೆಲಸ ಹಾಗೂ ಬಡವರ ಹಿತ ಕಾಪಾಡುವ ಕೆಲಸ ಮಾಡಲಿ.
ಯಾರು ತಪ್ಪು ಮಾಡಿದ್ರೂ , ಅದು ತಪ್ಪೆ. ವಚನಾನಂದ ಸ್ವಾಮೀಜಿ ತಮ್ಮ ಹೇಳಿಕೆ ಸಮರ್ಥಿಕೊಂಡಿದ್ದನ್ನು ಸಮಾಜ ಒಪ್ಪುವುದಿಲ್ಲ. ವಚನಾನಂದ ಸ್ವಾಮಿ ಇನ್ನಾದ್ರು ಸುಧಾರಣೆಯಾಗಿ, ತಮ್ಮ ಕಾರ್ಯ ವೈಖರಿ ಬದಲಾವಣೆ ಮಾಡದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.



