ಭೀಕರ ಬರಗಾಲ ಅಧ್ಯಯನಕ್ಕೆ ಮುಂದಿನ ವಾರ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ; ಕೃಷಿ ಸಚಿವ ಚೆಲುವರಾಯಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಕಲಬುರಗಿ: ಭೀಕರ ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಲು ಕೇಂದ್ರದಿಂದ ಮೂರು ತಂಡಗಳು ಮುಂದಿನ ವಾರ ರಾಜ್ಯಕ್ಕೆ ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಬರ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ನೀಡಿದೆ.‌ಅಕ್ಟೋಬರ್ 10ರೊಳಗೆ ತಂಡಗಳು ಆಗಮಿಸಲಿವೆ. ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಅನಾವೃಷ್ಟಿ ಪರಿಸ್ಥಿತಿ ಇದೆ. ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು,ಶೇ.95ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ ಎಂದರು.

ಕೇಂದ್ರದ ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತಿಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 28 ಸಾವಿರ ಕೋಟಿ ರೂ. ಹಾನಿಯಾಗಿದೆ ಅಂದಾಜಿಸಲಾಗಿದೆ. 4,000 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಈ ಬಾರಿಯ ಜೂನ್ ತಿಂಗಳಿನಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 56 ಮಳೆ ಕೊರತೆ ಉಂಟಾಯಿತು. ಜುಲೈನಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29 ಹೆಚ್ಚು ಮಳೆಯಾಗಿತ್ತು. ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇ.73 ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ.

ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

 

ಕೈ ಕೊಟ್ಟ ಮುಂಗಾರು ಮಳೆ: ಸಂಕಷ್ಟದಲ್ಲಿರುವ ರೈತರಿಗೆ ಸಿಹಿ ಸುದ್ದಿ; ಹಿಂಗಾರು ಮಳೆ ಶೇ.50ರಷ್ಟು‌ ಹೆಚ್ಚಳ ಸಾಧ್ಯತೆ..!

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *