ದಾವಣಗೆರೆ: ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಹಾಲು ಮಾರಾಟಗಾರರಿಗೆ ಮತ್ತು ಪತ್ರಿಕಾ ವಿತರಕರಿಗೂ ಆರ್ಥಿಕ ಸುಭದ್ರತೆಗಾಗಿ 3 ಕಂತುಗಳಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು. ಮೊದಲ ಕಂತಿನಲ್ಲಿ ರೂ 10,000 ಸಾಲ ನೀಡಿ 12 ತಿಂಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದಲ್ಲಿ ರೂ 20,000 ಸಾಲ ನೀಡಲಾಗುವುದು. ಪಡೆದ ಸಾಲವನ್ನು 18 ತಿಂಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದಲ್ಲಿ ರೂ 50,000 ಸಾಲ ಸೌಲಭ್ಯ ನೀಡಲಾಗುವುದು.

ಸಾಲ ಸೌಲಭ್ಯದ ಜೊತೆಗೆ ಕ್ಯೂ ಆರ್ ಕೋಡ್ ಮಾಡಿಸಿಕೊಳ್ಳಬೇಕು, ನಗರ ಸ್ಥಳೀಯ ಸಂಸ್ಥೆಗಳಿಂದ ಕೈಗೊಳ್ಳಲಾಗುವ ಸಮೀಕ್ಷೆಗೊಳಗಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಸಂಬಂಧಪಟ್ಟ ಶಾಖೆಯಲ್ಲಿ ವಿಚಾರಿಸಬಹುದು ಎಂದು ಹರಿಹರ ನಗರ ಸಭೆ ಪೌರಾಯುಕ್ತರಾದ ಬಸವರಾಜಪ್ಪ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *