Connect with us

Dvgsuddi Kannada | online news portal | Kannada news online

ದಾವಣಗೆರೆ: ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

images 33

ದಾವಣಗೆರೆ

ದಾವಣಗೆರೆ: ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಸಹಕಾರ ಸಪ್ತಾಹದ ಅಂಗವಾಗಿ 2023 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಜಿಲ್ಲಾ ಮಟ್ಟದಲ್ಲಿ ಅರ್ಹ ಶ್ರೇಷ್ಠ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ ಕನಿಷ್ಠ 10 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ, ಶೈಕ್ಷಣಿಕ, ಸಾಮಾಜಿಕ ಮತ್ತು ಧಾರ್ಮಿಕ ರಂಗಗಳಲ್ಲಿ ವಿಶಿಷ್ಟವಾದ ಸಾಧನೆ ಮಾಡಿದ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಮತ್ತು ಆರ್ಥಿಕ ದುರ್ಬಲ ವರ್ಗದ ಅಭಿವೃದ್ದಿಗಾಗಿ ಸಹಕಾರ ಕ್ಷೇತ್ರದ ಮೂಲಕ ಸೇವೆ ಸಲ್ಲಿಸಿದಂತಹ ಜಿಲ್ಲೆಯ ಶ್ರೇಷ್ಠ ಸಹಕಾರಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಸಕ್ತರು ಅಕ್ಟೋಬರ್ 11 ರಂದು ತಮ್ಮ ವೈಯಕ್ತಿಕ ಪರಿಚಯದೊಂದಿಗೆ 4 ಭಾವಚಿತ್ರಗಳನ್ನು ಲಗತ್ತಿಸಿ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿ., ಕಲಾಪ್ರಕಾಶ ವೃಂದ, 1ನೇ ಮಹಡಿ, ವಿನೋಬನಗರ 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್, ದಾವಣಗೆರೆ, ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಅನ್ನಪೂರ್ಣ. ಹೆಚ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top