ಭದ್ರಾ ನಾಲೆಗೆ ನಿರಂತರ ನೀರು ಹರಿಸುವಂತೆ ಡಿಸಿಎಂ ಭೇಟಿ ಬಳಿಕ ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ , ಸಚಿವ ಮಧುಬಂಗಾರಪ್ಪಗೆ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭದ್ರಾ ಡ್ಯಾಂ ಬಲದಂಡೆ ನಾಲೆಗೆ ನಿರಂತರ 100 ದಿನ ನೀರು ಹರಿಸುವಂತೆ ನಿನ್ನೆ ಡಿಸಿಎಂ‌ ಶಿವಕುಮಾರ್  ಭೇಟಿ ಮಾಡಿದ ಲೋಕಸಭಾ ‌ಸದಸ್ಯ ಜಿ. ಎಂ. ಸಿದ್ದೇಶ್ವರ ನೇತೃತ್ವದ ನಿಯೋಗವು, ಇಂದು (ಅ.13) ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಭದ್ರಾ ನೀರಾವರಿ ಸಲಹಾ ಸಮಿತಿ (ICC) ಅಧ್ಯಕ್ಷ ಮಧುಬಂಗಾರಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ದಾವಣಗೆರೆ ಜಿಲ್ಲೆ‌ ರೈತರ ಜೀವನಾಡಿ ಭದ್ರಾ ಜಲಾಶಯವಾಗಿದ್ದು, ಈ ಬಾರಿಯ ತೀವ್ರ ಮಳೆ ಕೊರತೆ ಹಿನ್ನೆಲೆ ಪೂರ್ಣ ಭರ್ತಿಯಾಗಿಲ್ಲ. ನಿರಂತರ 100 ದಿನ ನೀರು ಹರಿಸುವ ಭರವಸೆಯನ್ನು ನೀರಾವರಿ ಇಲಾಖೆ ನೀಡಿದ್ದರಿಂದ ರೈತರು ಭತ್ತ ನಾಟಿ ಮಾಡಿದ್ದರು. ಇದೀಗ ಇಲಾಖೆ ಆಫ್ ಅಂಡ್ ಆನ್ ಪದ್ಧತಿ ಮೊರೆ ಹೋಗಿದೆ.‌ ಈ ಪದ್ಧತಿ ರದ್ದು ಮಾಡಿ ನಿರಂತರವಾಗಿ ಬಲದಂಡೆ ನಾಲೆಗೆ ನಿರಂತರ ನೀರು ಹರಿಸಬೇಕೆಂದು ದಾವಣಗೆರೆ ಸಂಸದ, ಹರಿಹರ ಶಾಸಕರು ಹಾಗೂ ಅಚ್ಚುಕಟ್ಟು ರೈತರ ನೇತೃತ್ವದ ನಿಯೋಗ ಮನವಿ ಸಲ್ಲಿಸಿತ್ತು.

ನಿಮ್ಮ ಅಧ್ಯಕ್ಷತೆಯ ಸಮಿತಿ ಆನ್ ಅಂಡ್ ಆಫ್ ಪದ್ಧತಿ ಜಾರಿ ಮಾಡಿದೆ. ನಿರಂತರವಾಗಿ ನೀರು ಹರಿಸುವ ಪದ್ಧತಿ ರದ್ದುಗೊಳಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ ಬೆಳೆದಿರುವ ಭತ್ತದ ಬೆಳೆ ನಾಶವಾಗುತ್ತದೆ. ಆದ್ದರಿಂದ ನಿರಂತರ ನೀರು ಹರಿಸುವ ಪದ್ಧತಿ ಜಾರಿ ಮಾಡಬೇಕು. ಅಕ್ಟೋಬರ್ 15 ರಂದು ನೀರು ನಿಲುಗಡೆ ಮಾಡಬಾರದು ಎಂದು ಆಗ್ರಹಿಸಲಾಯಿತು.

ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ಎಂ. ವೀರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ. ಎಸ್. ಜಗದೀಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್, ರೈತ ಮುಖಂಡರಾದ ಕೊಳೇನಹಳ್ಳಿ ಬಿ. ಎಂ. ಸತೀಶ್, ಧನಂಜಯ ಕಡ್ಲೆಬಾಳ್, ಶಾಗಲೆ ದೇವೇಂದ್ರಪ್ಪ, ಬಾತಿ ವಿರೇಶ್ ದೊಗ್ಗಳ್ಳಿ, ಬಿ ಕೆ ಶಿವಕುಮಾರ್, ವಕೀಲ ಕೆ. ಎನ್. ಹನುಮಂತಪ್ಪ, ಅಥಿತ್ ಅಂಬರಕರ್, ಕೊಟ್ರೇಶ್ ಗೌಡ ಮತ್ತಿತರರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *