ದಾವಣಗೆರೆ: 16.80 ಲಕ್ಷ ಮೌಲ್ಯದ 24 ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಡಾ.ಬಾಬು ಜಗಜೀವನ್ ರಾಂ ದ್ವಿಚಕ್ರ ವಾಹನ ಸರಕು ಸಾಗಾಣಿಕ ಯೋಜನೆ ಅಡಿ 16.80 ಲಕ್ಷ ಮೊತ್ತದ 24 ಫಲಾನುಭವಿಗಳಿಗೆ ದ್ವಿಚಕ್ರವಾಹನ್ನು ಶಾಸಕ ಬಿ.ದೇವೇಂದ್ರಪ್ಪ ವಿತರಿಸಿದರು.

ನಂತರ ಮಾತನಾಡಿ,ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನ ಸಾಮಾನ್ಯರಿಗೆ ಸಲ್ಲಬೇಕಾದ ಸರ್ಕಾರದ ಯೋಜನೆಗಳು, ಸೇವೆಗಳು ಅರ್ಹ ಫಲಾ ನುಭವಿಗಳಿಗೆ ಸಲ್ಲಬೇಕು. ಸಂವಿಧಾನ ಬದ್ಧವಾಗಿ ಕೊಟ್ಟ ಅಧಿಕಾರವನ್ನು ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸಿ ಎಂದರು.

ತಹಸೀಲ್ದಾರ್‌ಸೈಯದ್‌ ಕಲೀಂ ಉಲ್ಲಾ ಮಾತನಾಡಿ, ಸರ್ಕಾರದ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಬೇಕಾದರೆ ಅಧಿಕಾರಿಗಳ ಪಾತ್ರ ದೊಡ್ಡದು. ಸರ್ಕಾರ ಆದೇಶದಂತೆ ನಿಗದಿತ ಸಮಯದ ಒಳಗೆ ಫಲಾನುಭವಿಗಳಿಗೆ ತಲುಪಿದರೆ ಮಾತ್ರ
ಸರ್ಕಾರದ ಆಶಯ ಈಡೇರುತ್ತದೆ. ಸರ್ಕಾರಿ ಆದೇಶದಂತೆ ಶ್ರಮಿಸುತ್ತೇವೆ ಎಂದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಾ ವೀರ್‌ಸಜ್ಜನ್‌ , ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್, ಪಪಂ ಸದಸ್ಯ
ತಾನಾಜಿ ಗೋಸಾಯಿ, ಆಲಿ, ಮೊಹಮದ್ ಗೌಸ್, ಪಿಎಸ್‌ಐ ಸಾಗರ್, ಪಲ್ಲಾಗಟ್ಟೆ ಶೇಖರಪ್ಪ ಇತರರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *