ದಸರಾ ರಜೆ ವಿಸ್ತರಣೆಗೆ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹುಬ್ಬಳ್ಳಿ: ದಸರಾ ರಜೆಯನ್ನು ವಿಸ್ತರಿಸಲು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ಈ ಮನವಿ ಸ್ವೀಕರಿಸಿದ ಸಭಾಪತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಫೋನ್ ಮಾಡಿ, ಮಕ್ಕಳ ಹಿತದೃಷ್ಟಿಯಿಂದ ರಜೆ ವಿಸ್ತರಿಸಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಿಕ್ಷಣ ವ್ಯವಸ್ಥೆ ಇವತ್ತು ಸರಿಯಾದ ರೀತಿಯಲ್ಲಿಲ್ಲ. ಹಿಂದೆಲ್ಲ ಶಾಲೆಯ ರಜಾ ದಿನಗಳು ನಿಗದಿಯಾಗಿರುತ್ತಿತ್ತು. ಅಕ್ಟೋಬರ್​ 2ನೇ ತಾರೀಖಿನಿಂದ 30ನೇ ತಾರೀಖಿನ ವರೆಗೆ ದಸರಾ ರಜೆ ಇರುತ್ತಿತ್ತು. ನಂತರ ಜ್ಞಾನವಿಲ್ಲದ ಕೆಲವು ಅಧಿಕಾರಿಗಳು ತಮಗೆ ಹೇಗೆ ಬೇಕೋ ಹಾಗೆ ದಸರಾಗೆ 4 ದಿನ, ದೀಪಾವಳಿಗೆ 4 ದಿನ ರಜೆ ಕೊಟ್ಟಿದ್ದಾರೆ. ಇದು ಸರಿಯಾದ ವ್ಯವಸ್ಥೆಯಲ್ಲ ಎಂದರು.

ಹಿಂದೆ ಅಕ್ಟೋಬರ್​ 2ರಿಂದ 30ನೇ ತಾರೀಖಿನವರೆಗೆ ದಸರಾ, ದೀಪಾವಳಿ ಹಬ್ಬ ಆಚರಿಸಿ ಮಕ್ಕಳು ಮತ್ತು ಶಿಕ್ಷಕರು ಶಾಲೆಗೆ ಬರುತ್ತಿದ್ದರು. ಈ ಪದ್ಧತಿಯನ್ನು ಕೆಲವು ಅಧಿಕಾರಿಗಳು ಹಾಳು ಮಾಡಿದರು. ನಾನು ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಈಗ ಮತ್ತೊಂದು ಪತ್ರ ಬರೆಯುತ್ತೇನೆ. ಈ ಹಿಂದೆ ಇದ್ದಂತಹ ಪದ್ಧತಿಯನ್ನೇ ಸರ್ಕಾರ ಮುಂದುವರೆಸಿಕೊಂಡು ಹೋಗಬೇಕೆಂದರು.

ದಸರಾ ರಜೆ ಅವಧಿ ಕಡಿತ ಮಾಡಲಾಗಿದೆ. ರಜೆ ವಿಸ್ತರಣೆ ಮಾಡಬೇಕೆಂದು ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿತ್ತು. ಇದೇ ತಿಂಗಳ 25ಕ್ಕೆ ಮತ್ತೆ ಶಾಲೆ ಆರಂಭ ಎಂದು ಇಲಾಖೆ ಹೇಳಿದೆ. ಆದರೆ, 24ಕ್ಕೆ ದಸರಾ ಹಬ್ಬ ಇದೆ. ಮೊದಲು ದಸರಾ ರಜೆಯನ್ನು ಒಂದು ತಿಂಗಳ ಕಾಲ ನೀಡಲಾಗುತ್ತಿತ್ತು. ಇದೀಗ ಕೇವಲ 15 ದಿನಗಳಿಗೆ ರಜೆಯನ್ನು ಕಡಿತ ಮಾಡಲಾಗಿದೆ. ದಸರಾ ಹಬ್ಬದ ಮರುದಿನವೇ ಶಾಲೆ ಆರಂಭ ಮಾಡ್ತಿರೋದು ಮಕ್ಕಳಿಗೆ ಒತ್ತಡ ಆಗುತ್ತದೆ. ಮಕ್ಕಳು ಹಬ್ಬಕ್ಕೆ ಹೋಗಿರುತ್ತಾರೆ ಆ ಕಾರಣಕ್ಕೆ ದಸರಾ ರಜೆಯನ್ನ ವಿಸ್ತರಣೆ ಮಾಡಬೇಕು ಎಂದು ಶಿಕ್ಷಕರ ಸಂಘ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಶಿಕ್ಷಕರು ಪತ್ರ ಬರೆದಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *