ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಡಿಸಿಎಂ ಫೀಡರ್ನ ಜಯನಗರ ‘ಸಿ’ ಬ್ಲಾಕ್, ಶಕ್ತಿನಗರ, ಶೇಖರಪ್ಪ ಗೋಡೌನ್ ಹಿಂಭಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿದ್ದು, ಜ. 21 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



