Connect with us

Dvgsuddi Kannada | online news portal | Kannada news online

ಚಿತ್ರಕಲಾ ಸಂಶೋಧಕರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಚಿತ್ರಕಲಾ ಸಂಶೋಧಕರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ದಾವಣಗೆರೆ:ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಚಿತ್ರಕಲಾ ಕ್ಷೇತ್ರದಲ್ಲಿ ಸಂಶೋಧನೆ ಮಾಡುವರಿಗೆ  2019-20ನೇ ಸಾಲಿನ ಲಲಿತಾಕಲಾ ಶಿಷ್ಯವೇತನಕ್ಕಾಗಿ (ಫೇಲೋಶೀಪ್) ಅರ್ಜಿಗಳನ್ನು ಆಹ್ವಾನಿಸಿದೆ.

ಶಿಷ್ಯವೇತನದ ಕಾಲಾವಧಿಯು ಒಂದು ವರ್ಷದ್ದಾಗಿದ್ದು, ಆಸಕ್ತರು ನೇರವಾಗಿ ದೃಶ್ಯಕಲೆಗೆ ಸಂಬಂಧಿಸಿದ ವಿಷಯಗಳನ್ನು ಆರಿಸಿಕೊಂಡು ಸಂಶೋಧನಾ ಪ್ರಬಂಧಗಳನ್ನು ರಚಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವಾಗ ಸಂಶೋಧನೆಗೆ ಆಯ್ಕೆ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿದಂತೆ 5 ರಿಂದ 6 ಪುಟಗಳ ಸಾರಲೇಖನವನ್ನು ಅರ್ಜಿಯೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಫೆ.10 ಕೊನೆಯ ದಿನ.

ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳನ್ನು ಸಂದರ್ಶನದ ಮೂಲಕ ಸಾಮಾನ್ಯವರ್ಗದ ಅರ್ಹ 5 ಕಲಾವಿದರು/ಸಂಶೋಧಕರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಶಿಷ್ಯವೇತನದ ಮೊತ್ತ ರೂ.1 ಲಕ್ಷ ಗಳನ್ನು ನೀಡಲಾಗುವುದು. ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯೋಮಿತಿ 26 ವರ್ಷ ಆಗಿರುತ್ತದೆ.

ನಿಗದಿತ ಅರ್ಜಿ ನಮೂನೆ ಮತ್ತು ನಿಯಮಾವಳಿಯನ್ನು ಲಲಿತಕಲಾ ಅಕಾಡೆಮಿಯ ವೆಬ್‍ಸೈಟ್ ಇಲ್ಲವೆ ಅಕಾಡೆಮಿಯ ಕಚೇರಿಯಿಂದ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡಭವನ, ಜೆ.ಸಿ ರಸ್ತೆ ಬೆಂಗಳೂರು-560002. ದೂ.ಸಂ- 080-22480297ಗೆ ಸಂಪರ್ಕಿಸಬಹುದು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top