ಕರ್ನಾಟಕ ಉಚ್ಛ ನ್ಯಾಯಾಲಯದಿಂದ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಗೆ ವೆಬ್ ಸೈಟ್ karnatakajudiciary.kar.nic.in ಗೆ ಭೇಟಿ ನೀಡಬಹುದು.ಒಟ್ಟು 14 ಹುದ್ದೆಗಳ ನೇಮಕಾತಿ ನಡೆಯಲಿದೆ. ಈಗಾಗಲೇ ವೃತ್ತಿಪರ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು. ಅಭ್ಯರ್ಥಿಗಳು ಹೈಕೋರ್ಟ್ ಅಥವಾ ಅದರ ಅಧೀನ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಗಮನಿಸಿ ಮುಂದುವರೆಯುವುದು ಅವಶ್ಯಕವಾಗಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಪ್ರತ್ಯೇಕ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮನರಿಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ, ಇತರ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ಇರುತ್ತೆ.
ಮುಖ್ಯ ಪರೀಕ್ಷೆಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 750 ರೂ, ಇತರ ಅಭ್ಯರ್ಥಿಗಳಿಗೆ 1500 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಈ ಹುದ್ದೆಗೆ ಪ್ರಿಲಿಮನರಿ, ಮುಖ್ಯ ಪರೀಕ್ಷೆ ಮತ್ತು ವೈವಾ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಕ್ಟೋಬರ್ 19ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 17 ಕಡೆ ದಿನ ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್ 18 ಆಗಿರುತ್ತದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ karnatakajudiciary.kar.nic.in ಬೆಬ್ ಸೇಟ್ ಗೆ ಭೇಟಿ ನೀಡಬಹುದಾಗಿದೆ.



