ದಾವಣಗೆರೆ: ಅಸಂಘಟಿತ ಕಾರ್ಮಿಕರ ಅಪಘಾತ ಪರಿಹಾರಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಸಂಘಟಿತ ಕಾರ್ಮಿಕರು ಇ-ಶ್ರಮ ಪೋರ್ಟಲ್ ಮೂಲಕ ನೊಂದಾಯಿತವಾಗಿ ಅಪಘಾತಗೊಂಡ ಫಲಾನುಭವಿಗಳಿಗೆ 2 ಲಕ್ಷ ಅಪಘಾತ ಪರಿಹಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಫಲಾನುಭವಿಗಳು 26 ಆಗಸ್ಟ್ 2021 ರಿಂದ 31 ಮಾರ್ಚ್ 2022ರ ಒಳಗಾಗಿ ನೊಂದಾಯಿಸಿ ಅಪಘಾತಗೊಂಡವರಿಗೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.ಅಪಘಾತದಿಂದ ಮರಣ ಹೊಂದಿದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ.

ಇಫ್.ಐ.ಆರ್ ಪ್ರತಿ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಆಸ್ಪತ್ರೆ ದಾಖಲೆಗಳನ್ನು ನಗರದ ಡಿ. ದೇವರಾಜು ಅರಸು ಬಡಾವಣೆಯಲ್ಲಿರುವ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08192237332ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *