ಬೆಂಗಳೂರು: ರಾಜ್ಯ ಸರ್ಕಾರ ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ನೀಡಿದೆ. ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ಟ್ರಾನ್ಸ್ ಫಾರ್ಮರ್(Transformer) ಸಹಿತ ಮೂಲ ಸೌಕರ್ಯ ನೀಡುವುದನ್ನು ಸರ್ಕಾರ ಕಡಿತಗೊಳಿಸಿದೆ. ಈ ಕುರಿತ ರಸರ್ಕಾರ ಆದೇಶ ಮಾಡಿದ್ದು, 2023ರ ಸೆಪ್ಟಂಬರ್ 22 ನಂತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಸಹಿತ ಟ್ರಾನ್ಸ್ ಫಾರ್ಮರ್ (ಟಿಸಿ) ಅನ್ನು ಸ್ವಂತ ಖರ್ಚಿನಲ್ಲೇ ಪಡೆಯಬೇಕಿದೆ.
ಇಂಧನ ಇಲಾಖೆ ಆದೇಶ ಪ್ರಕಾರ 2023ರ ಸೆ.22ಕ್ಕೂ ಮುನ್ನ ವಿದ್ಯುತ್ ಸಂಪರ್ಕಕ್ಕಾಗಿ ನೋಂದಣಿ ಮಾಡಿಸಿರುವ ರೈತರಿಗೆ ಯಾವುದೇ ಸಮಸ್ಯೆ ಆಗಲ್ಲ. ಸೆ.22ರ ನಂತರ ನೋಂದಣಿಯಾದ ರೈತರಿಗೆ ವಿದ್ಯುತ್ ಸಂಪರ್ಕವು ದುಬಾರಿಯಾಗಲಿದೆ. ಇದಕ್ಕೂ ಮೊದಲು ರಾಜ್ಯ ಸರ್ಕಾರದ ಶೀಘ್ರ ವಿದ್ಯುತ್ ಮತ್ತು ಅಕ್ರಮ ಸಕ್ರಮ ಯೋಜನೆ ರೂಪಿಸಿತ್ತು.
ಅಕ್ರಮ ಸಕ್ರಮ ಅಡಿ ಪ್ರತಿ ಕೊಳವೆ ಬಾವಿಗೆ ರೈತರಿಂದ ಭದ್ರತಾ ಶುಲ್ಕದ ರೂಪದಲ್ಲಿ 24 ಸಾವಿರ ರೂ ಕಟ್ಟಿಸಿಕೊಳ್ಳುತ್ತಿತ್ತು. ನಂತರ ಸಿನೀಯರಿಟಿ ಆಧಾರ ಮೇಲೆ ಸರ್ಕಾರವೇ ಟಿಸಿ, 500 ಮೀಟರ್ ವರೆಗೆ ವಿದ್ಯುತ್ ಕಂಬ ಎಳೆದು ಕೊಡುತ್ತಿತ್ತು. ಇನ್ಮೊಂದು ಯೋಜನೆಯಾದ ಶೀಘ್ರ ವಿದ್ಯುತ್ ಯೋಜನೆಯಲ್ಲಿ ಭದ್ರತಾ ಠೇವಣಿಗೆ ಟಿಸಿ ಮಾತ್ರ ಫ್ರೀ ಕೊಡುತ್ತಿತ್ತು. ವಿದ್ಯುತ್ ಕಂಬ, ತಂತಿಯನ್ನು ರೈತರೇ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು.
ಕೃಷಿ ಪಂಪ್ಸೆಟ್ಗಳಿಗೆ ಉಚಿತವಾಗಿ ಟ್ರಾನ್ಸ್ಫಾರ್ಮರ್ ಸಮೇತ ಮೂಲಸೌಕರ್ಯ ಒದಗಿಸುವುದು ಸರಕಾರದ ಬೊಕ್ಕಸಕ್ಕೆ ದೊಡ್ಡ ಆರ್ಥಿಕ ಹೊರೆಯಾಗಿತ್ತು. ಟ್ರಾನ್ಸ್ಫಾರ್ಮರ್ಗಳ ಖರೀದಿ, ದುರಸ್ತಿ, ನಿರ್ವಹಣೆ ಮತ್ತು ಬದಲಾವಣೆಗೆ ಇಂಧನ ಇಲಾಖೆಯು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಈ ಆರ್ಥಿಕ ಹೊರೆ ತಪ್ಪಿಸಲು ಸರಕಾರ, ಅಕ್ರಮ ಸಕ್ರಮ ಮತ್ತು ಶೀಘ್ರ ವಿದ್ಯುತ್ ಯೋಜನೆಯ ಸವಲತ್ತು ಸ್ಥಗಿತಗೊಳಿಸಲು ಮುಂದಾಗಿದೆ.
ರಾಜ್ಯ ಸರ್ಕಾರ ಫ್ರೀ ಟಿಸಿ ನೀಡುವ ಯೋಜನೆಯನ್ನು ರದ್ದುಗೊಳಿಸಿದೆ. ರೈತರು ಹೊಸದಾಗಿ ಕೊಳವೆ ಬಾವಿ ಕೊರೆದ್ರೆ, ಸ್ವಂತ ಖರ್ಚಿನಲ್ಲಿಯೇ ಟಿಸಿ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಈಗ ಏಕಾಏಕಿ ಈ ಎರಡೂ ಯೋಜನೆಗಳನ್ನು ಸ್ಥಗಿತಗೊಳಿಸಿರುವ ಸರಕಾರ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ.ಮಾರುಕಟ್ಟೆಯಲ್ಲಿ 25 ಕೆ.ವಿ. ಸಾಮರ್ಥ್ಯದ ಟ್ರಾನ್ಸ್ಫಾರ್ಮರ್ಗಳ ದರ ಕನಿಷ್ಠ 70 ಸಾವಿರದಿಂದ 95 ಸಾವಿರ ರೂ. ಇದೆ. ಇದರ ಜತೆಗೆ, ವಿದ್ಯುತ್ ಸಂಪರ್ಕಕ್ಕಾಗಿ ಎಸ್ಕಾಂಗಳಿಗೆ ಶುಲ್ಕ ಸಹ ಪಾವತಿಸಬೇಕಿದೆ. ಇದೆಲ್ಲ ಲೆಕ್ಕಾಚಾರ ಹಾಕಿದ್ರೆ ಅನುಮತಿ ಪಡೆದ ಒಂದು ಟಿಸಿ ಪಡೆಯಲು ಕನಿಷ್ಠ 2 ಲಕ್ಷ ರೂ. ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ.



