ದಾವಣಗೆರೆ: ಖೋ-ಖೋ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು, ತರಬೇತುದಾರರು ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಗೋವಾದಲ್ಲಿ ನವಂಬರ್ 4 ರಿಂದ 8 ರವರೆಗೆ ನಡೆಯಲಿರುವ 37ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳು ಮತ್ತು ತರಬೇತುದಾರರು ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ರಾಜ್ಯ ಪುರಷರ ಖೋ-ಖೋ ತಂಡಕ್ಕೆ ಜಿಲ್ಲಾ ಕ್ರೀಡಾ ವಸತಿ ನಿಲಯದ ಕ್ರೀಡಾ ಪಟುಗಳಾದ ಅರ್ಜುನ್, ಮಹಮ್ಮದ್ ತಾಸೀನ್ ಹಾಗೂ ಶರತ್ ಜೆ.ಜಿ ಇವರು ಆಯ್ಕೆಯಾಗಿದ್ದು, ಇಲಾಖೆಯ ತರಬೇತುದಾರರಾದ ರಾಮಲಿಂಗಪ್ಪ. ಜೆ ಮತ್ತು ಸುನಿತ ಎಂ.ಸಿ.ಇವರ ಬಳಿ ತರಬೇತಿ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ರಾಜ್ಯ ಮಹಿಳೆಯರ ಖೋ-ಖೋ ತಂಡಕ್ಕೆ ತರಬೇತುದಾರರಾಗಿ ರಾಮಲಿಂಗಪ್ಪ ಜೆ ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಆರ್.ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.

ಇನ್ಮುಂದೆ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರ; ಜಾತಿ ಮತ್ತು ಆದಾಯಪ್ರಮಾಣ ಪತ್ರ ಸೇರಿ 44 ಸೇವೆ ಲಭ್ಯ; ದರ ಪಟ್ಟಿ ಪ್ರಕಟಿಸಿ ಸರ್ಕಾರ ಸುತ್ತೋಲೆ

 

ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ; ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಫ್ರೀ ಟ್ರಾನ್ಸ್ ಫಾರ್ಮರ್‌ ಸಿಗಲ್ಲ….!

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *