ಡಿವಿಜಿ ಸುದ್ದಿ, ಬೆಂಗಳೂರು: ಬರ್ತ್ ಡೇ ವೇಳೆ ಕತ್ತಿಯಲ್ಲಿ ಕೇಕ್ ಕತ್ತರಿಸಿ ವಿವಾದಕ್ಕೆ ಕಾರಣರಾಗಿದ್ದ ನಟ ದುನಿಯಾ ವಿಜಯ್ ಕ್ಷಮೆ ಕೇಳಿದ್ದಾರೆ. ನನ್ನಿಂದ ತಪ್ಪಾಗಿದೆ, ಮತ್ತೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.
ಈ ವಿಚಾರವಾಗಿ ಮಂಗಳವಾರ ಗಿರಿನಗರ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರ. ಎರಡು ಗಂಟೆ ಪೊಲೀಸರ ಮುಂದೆ ಘಟನೆ ಬಗ್ಗೆ ವಿಜಯ್ ವಿವರಣೆ ನೀಡಿದರು. ನಿಯಮ ಉಲ್ಲಂಘಿಸಿದಕ್ಕೆ ವಿಜಯ್ ಅವರಿಗೆ ಗಿರಿನಗರ ಪೊಲೀಸರು ನೋಟಿಸ್ ನೀಡಿದ್ದರು.
ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಜಯ್, ನನ್ನಿಂದ ತಪ್ಪಾಗಿದೆ, ಮತ್ತೆ ಇಂತಹ ಮರುಕಳಿಸದಂತೆ ನೋಡಿಕೊಳ್ಳುತ್ತೇನೆ. ಮತ್ತೆ ವಿಚಾರಣೆಗೆ ಕರೆದರೆ, ಹಾಜರಾಗುತ್ತೇನೆ. ಹುಟ್ಟು ಹಬ್ಬದ ಆಚರಣೆ ವೇಳೆ ಯಾರೋ ಅಭಿಮಾನಿ ತಲ್ವಾರ್ ಕೊಟ್ಟ, ಆ ತಲ್ವಾರ್ನಲ್ಲಿ ಕೇಕ್ ಕಟ್ ಮಾಡೋದು ತಪ್ಪು ಎಂದು ನಂಗೆ ಗೊತ್ತಿರಲಿಲ್ಲ, ಅದು ಯಾರು ತಂದು ಕೊಟ್ರು ಅಂತಾ ಕೂಡ ಗೊತ್ತಾಗಲಿಲ್ಲ, ತುಂಬಾ ಜನ ಇದ್ದರು ಎಂದರು.
ಆ ಕತ್ತಿ ಈಗ ಎಲ್ಲಿದೆ ಅಂತನೂ ಗೊತ್ತಿಲ್ಲ, ಎಲ್ಲಿದೆ ಅಂತ ಹುಡುಕಿ ತಂದು ಕೊಡುವೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯನ್ನೂ ಪೊಲೀಸರಿಗೆ ತಂದು ಕೊಡುತ್ತೇನೆ ಎಂದು ಹೇಳಿದರು.
.