ಬಿಸಿಯೂಟ ಕಾರ್ಯಕರ್ತರ ಬೃಹತ್ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ  ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು  ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ  ಸಾವಿರಾರು ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ನಲ್ಲಿ ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಲ ಕಾರ್ಯಕರ್ತೆಯರು ಪುಟ್ಟ ಮಕ್ಕಳನ್ನು ಮಡಿಲಲ್ಲಿ ಇಟ್ಟುಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಳಗ್ಗೆಯಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದುವರೆಗೂ ಮಂತ್ರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಯಕರ್ತೆಯರ ಅಳಲು ಕೇಳಿಲ್ಲ.

ಯಾವುದೇ ಭರವಸೆ ನೀಡದ ಸರ್ಕಾರದ ಧೋರಣೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಸ್ಥಳದಿಂದ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *