ದಾವಣಗೆರೆ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಯಿಂದ 4.50 ಲಕ್ಷ ಬೆಲೆ ಬಾಳುವ 89.52 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಜಿಲ್ಲೆಯ ಚನ್ನಗಿರಿ ಪಟ್ಟಣದ ಕಾಳಮ್ಮನ ಬೀದಿಯ ಕಾರ-ಮಂಡಕ್ಕಿ ವ್ಯಾಪಾರಸ್ಥೆ ಜ್ಯೋತಿ(42) ಸಂಜೆ ಎಂದಿನಂತೆ ಮಂಡಕ್ಕಿ ಬೋಂಡಾ ವ್ಯಾಪಾರಕ್ಕೆಂದು ತಮ್ಮ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು. ಆ ಸಮಯದಲ್ಲಿ ಯಾರೋ ಕಳ್ಳರು ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ ಒಟ್ಟು 4,61,000 ರೂ. ಬೆಲೆಯ 132 ಗ್ರಾಂ ಬಂಗಾರದ ಆಭರಣ ಮತ್ತು 15,000- ರೂ. ಬೆಲೆಯ 250 ಗ್ರಾಂ ಬೆಳ್ಳಿ ಸಾಮಾನುಗಳನ್ನು ಹಾಗೂ 1 ಲಕ್ಷ ನಗದು ಹಣವನ್ನು ಕಳವು ಮಾಡಿಕೊಂಡು ಹೋಗದ್ದಾರೆ ಎಂದು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮಾಲು ಮತ್ತು ಆರೋಪಿತರನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ ಸಂತೋಷ್ ಹಾಗೂ ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ಪ್ರಶಾಂತ್ ಜಿ ಮುನ್ನೋಳಿ ಮಾರ್ಗದರ್ಶನದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನಿರಂಜನ ಬಿ ನೇತೃತ್ವದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಸಿಬ್ಬಂದಿಯವರನ್ನೊಳಗೊಂಡ ತಂಡ, ಆರೋಪಿತ ಚನ್ನಗಿರಿಯ ಮೊಹಮ್ಮದ್ ಗೌಸ್ ಎಸ್ @ ಅಸ್ಲಾಂ (32) ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯಿಂದ ಕಳ್ಳತನ ಮಾಡಿದ್ದ ಒಟ್ಟು 4,50,000 ರೂ ಬೆಲೆಬಾಳುವ 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಆರೋಪಿ ಈ ಹಿಂದೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ & ಚಿತ್ರದುರ್ಗ ನಗರ ಠಾಣೆಯಲ್ಲಿ ಆರೋಪಿತನಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದನು.ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ ಪಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಎಸ್ ಪಿ ವಿಜಯ ಕುಮಾರ ಎಂ ಸಂತೋಷ ಶ್ಲಾಘಿಸಿದ್ದಾರೆ.



