ಕೃಷಿ ಭೂಮಿ ಖಾತೆ ಮಾಡಿಕೊಡಲು ಬರೋಬ್ಬರಿ 28 ಲಕ್ಷ‌ ಲಂಚಕ್ಕೆ ಬೇಡಿಕೆ; 3.5 ಲಕ್ಷ ಪಡೆಯುವಾಗ ರೆಡ್ ಹ್ಯಾಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ…!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೃಷಿ ಭೂಮಿ ಖಾತೆ ಮತ್ತು ಪೋಡಿ ಮಾಡಿಕೊಡಲು 28 ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟು, 3.5 ಲಕ್ಷ ಕ್ಯಾಶ್ ಪಡೆಯುವಾಗ ರೆಡ್ ಹ್ಯಾಡ್ ಆಗಿ ದಾಸನಪುರದ ಕಂದಾಯ ನಿರೀಕ್ಷಕ (RI) ಮತ್ತು ಮತ್ತು ಆತನ ಆಪ್ತನನ್ನು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ನಗರ ಲೋಕಾಯುಕ್ತ ಎಸ್‍ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆದಿದೆ. ಬಂಧಿತ ಕಂದಾಯ ನಿರೀಕ್ಷಕನನ್ನು ವಸಂತ್​ ಎಂದು ಗುರುತಿಸಲಾಗಿದೆ. ವಸಂತ್​ 3.5 ಲಕ್ಷ ರೂ. ನಗದು ಹಾಗೂ 4 ಲಕ್ಷ ಚೆಕ್ ರೂಪದಲ್ಲಿ ಲಂಚ ಪಡೆದಿದ್ದ ಎಂದು ತಿಳಿದುಬಂದಿದೆ.ಕಂದಾಯ ನಿರೀಕ್ಷಕ ವಸಂತ್​ ಅವರು ಬೆಟ್ಟಸ್ವಾಮಿ ಗೌಡ ಎಂಬುವವರಿಗೆ ಖಾತೆ ಮತ್ತು‌ ಪೋಡಿ ಮಾಡಿ ಕೊಡಲು 28 ಲಕ್ಷ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದ. ಇದರಲ್ಲಿ ಮೊದಲೇ ಚೆಕ್‍ ರೂಪದಲ್ಲಿ 4 ಲಕ್ಷ ರೂ. ಹಣವನ್ನು ಪಡೆದಿದ್ದ. ಬಳಿಕ ಬುಧವಾರ ಖಾಸಗಿ ಹೋಟೆಲ್‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದಾಗ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು ವಸಂತ್ ಹಾಗೂ ಆತನ ಆಪ್ತನನ್ನು ರೆಡ್‍ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಯು ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ಹೇಳಿದ್ದು,ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿ 9 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದು ವಿಚಾರಣೆ ಮುಂದುವರೆದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *