ದಾವಣಗೆರೆ: ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಾತಿ ಜನಗಣತಿ ವರದಿ ಬಿಡುಗಡೆಗೆ ನಿನ್ನೆ (ನ.09) ಬೆಂಗಳೂರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಇಂದು ಮತ್ತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಜನಗಣತಿ ಆಗ್ರಹಿಸುತ್ತೇವೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದರು.

ಪಂಚಮಸಾಲಿ ಲಿಂಗಾಯತ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಲಿದ್ದೇವೆ.ಡಿಸೆಂಬರ್ 23, 24 ರಂದು ದಾವಣಗೆರೆಯಲ್ಲಿ ಮಹಾ ಸಭಾದ ಅಧಿವೇಶನ ನಡೆಯಲಿದ್ದು, ಸಮಾವೇಶದಲಲ್ಲಿ ಎರಡು ಲಕ್ಷ ಜನರು ಸೇರಲಿದ್ದಾರೆ. ವೀರಶೈವ ಲಿಂಗಾಯತ ಸಮಾವೇಶದಲ್ಲಿ ಹೆಚ್ಚಿನ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *