ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ತಾತ್ಕಾಲಿಕ ಸಂಶೋಧನಾ ಸಹಾಯಕರಾಗಿ ಕಾರ್ಯ ನಿರ್ವಹಿಸಲು ಅರ್ಹ, ಆಸಕ್ತ ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ
ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಹರ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಸಮಾಜ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ, ಸ್ವವಿವರ, ಶೈಕ್ಷಣಿಕ ಪದವಿ ಅಂಕಪಟ್ಟಿ, ಪ್ರಮಾಣಪತ್ರಗಳೊಂದಿಗೆ ನ. 17, 2023 ರಂದು ಬೆಳಿಗ್ಗೆ 10.30ಕ್ಕೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ವಿಭಾಗದ ಅಧ್ಯಕ್ಷ ಡಾ. ಎಚ್.ಗೌಡ (9740701206) ಇವರನ್ನು ಸಂಪರ್ಕಿಸಬಹುದು ಎಂದು ಕುಲಸಚಿವರು
ತಿಳಿಸಿದ್ದಾರೆ.



