ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ನವೆಂಬರ್ ತಿಂಗಳ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.
ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಎಂ.ಬಿ ಅಶ್ವಥ್ ತಿಳಿಸಿದ್ದಾರೆ.



