Connect with us

Dvgsuddi Kannada | online news portal | Kannada news online

ದಾವಣಗೆರೆ: ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಬೃಹತ್ ಸಾಲ ಮೇಳ

images 60

ದಾವಣಗೆರೆ

ದಾವಣಗೆರೆ: ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಬೃಹತ್ ಸಾಲ ಮೇಳ

ದಾವಣಗೆರೆ: ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಬೃಹತ್ ರಿಟೇಲ್ ಸಾಲ ಮೇಳವನ್ನು ನ. 20ರಂದು ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ದಾವಣಗೆರೆ ಪ್ರಾದೇಶಿಕ ವ್ಯವಸ್ಥಾಪಕ ಪ್ರವೀಣ್‌ಕುಮಾರ್ ಪ್ರಭಾಕರ್‌ ಅಧ್ಯಕ್ಷತೆಯಲ್ಲಿ ಮೇಳ ನಡೆಯಲಿದೆ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಎಸ್.ಕೆ. ಭಾಗ್ಯರೇಖಾ, ನಿಂಗೇಗೌಡ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಜಿ.ಸಿ. ಪ್ರಕಾಶ್ ಹಾಗೂ
ಇಂಡಿಯನ್ ಕಾಂಕ್ರೀಟ್ ಇನ್‌ಸ್ಟಿಟ್ಯೂಟ್‌ನ ಕಾರ್ಯದರ್ಶಿ ಜಿ.ಬಿ. ಸುರೇಶ ಸೇರಿ ಇತರರು ಭಾಗವಹಿಸುವರು.

ನಗರದ ಪ್ರತಿಷ್ಠಿತ ವಾಹನ ಹಾಗೂ ಕಟ್ಟಡ ನಿರ್ಮಾಣ ಕಂಪನಿಗಳು ಭಾಗವಹಿಸಲಿದ್ದು, ಬ್ಯಾ೦ಕಿನ ಗ್ರಾಹಕರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹಿರಿಯ ವ್ಯವಸ್ಥಾಪಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top