ದಾವಣಗೆರೆ: ಗುಮಾಸ್ತ, ಜವಾನ, ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಭರ್ತಿಗೆ ಅರ್ಜಿ‌ ಸಲ್ಲಿಸಲು ಡಿ.8 ಕೊನೆ ದಿನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ ಗುಮಾಸ್ತ, ಜವಾನ, ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು ಮೂರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಡಿ.8ರಂದು ಕೊನೆಯ ದಿನವಾಗಿದೆ.

ಹುದ್ದೆಗಳು:ಆಡಳಿತ ಸಹಾಯಕ/ಗುಮಾಸ್ತ -1, ಸ್ವಾಗತಕಾರರು-ಡಾಟಾ ಎಂಟ್ರಿ ಆಪರೇಟರ್​ -1, ಜವಾನ- 1, ವಿದ್ಯಾರ್ಹತೆ:ಆಡಳಿತ ಸಹಾಯಕ/ ಗುಮಾಸ್ತ ಹುದ್ದೆಗೆ ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಕಂಪ್ಯೂಟರ್​ ಜ್ಞಾನ ಹೊಂದಿರಬೇಕು. ಸ್ವಾಗತಕಾರರು-ಟಾಡಾ ಎಂಟ್ರಿ ಆಪರೇಟರ್​ ಹುದ್ದೆಗೆ ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಸಾಮಾನ್ಯ ಕಂಪ್ಯೂಟರ್​ ಜ್ಞಾನ ಹೊಂದಿರಬೇಕು. ಜವಾನ ಹುದ್ದೆಗೆ ಕನಿಷ್ಟ 10ನೇ ತರಗತಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳನ್ನು ಸಂದರ್ಶನ, ಕೌಶಲ್ಯ, ಕಂಪ್ಯೂಟರ್​ ಮತ್ತು ಬೆರಳಚ್ಚು ನಿಖರತೆ ಮತ್ತು ನೈಪುಣ್ಯತೆ ಆಧಾರಿಸಿ ನೇಮಕಾತಿ ಮಾಡಲಾಗುವುದು. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.

ವೇತನ: ಮಾಸಿಕ ಆಡಳಿತ ಸಹಾಯಕ/ಗುಮಾಸ್ತ – 19,000 ರೂ . ಸ್ವಾಗತಕಾರರ/ ಡಾಟಾ ಎಂಟ್ರಿ ಆಪರೇಟರ್​ – 17,271 ರೂ., ಜವಾನ- 15,202 ರೂ.,ಅಭ್ಯರ್ಥಿಗಳು ಆಫ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯೊಂದಿಗೆ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನೊಳಗೊಂಡ ಮಾಹಿತಿ, ಶೈಕ್ಷಣಿಕ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲಾತಿ ವಿವರಗಳನ್ನು ಈ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಳೆ ನ್ಯಾಯಾಲಯಗಳ ಸಂಕೀರ್ಣ, ಹೈಸ್ಕೂಲ್​ ಮೈದಾನದ ಹತ್ತಿರ, ದಾವಣಗೆರೆ.

ನವೆಂಬರ್​ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ದಿನಾಂಕ ಡಿಸೆಂಬರ್​ 8 ಆಗಿದೆ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ವೆಬ್‌ಸೈಟ್: davanagere.dcourts.gov.in ಗೆ ಭೇಟಿ ನೀಡಿ ಪರಿಶೀಲನೆ ಮಾಡಬಹುದಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *