ಡಿವಿಜಿ ಸುದ್ದಿ, ದಾವಣಗೆರೆ : ಕಾಂಗ್ರೆಸ್ ಪಕ್ಷದಿಂದ ಮಹಾನಗರ ಪಾಲಿಕೆಯ ನೂತನ ಸದಸ್ಯರಿಗೆ, ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಚಿಂತನ- ಮಂಥನ ಸಮಾವೇಶ ಹಾಗೂ ಸನ್ಮಾನ ಸಮಾರಂಭವನ್ನು ನಾಳೆ (ಗುರುವಾರ) ಆಯೋಜಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ನಗರದ ಎಂಸಿಸಿ ಎ ಬ್ಲಾಕ್ನ ಶ್ರೀ ತೋಗಟವೀರ ಕಲ್ಯಾಣ ಮಂದಿರದಲ್ಲಿ ಸಂಜೆ 5.00ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಈ ಸಮಾರಂಭದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ರವರು ವಹಿಸಿಕೊಳ್ಳಲಿದ್ದಾರೆ.
ಈ ಸಮಾರಂಭಕ್ಕೆ ಮಾಜಿ ಸಚಿವರು, ಶಾಸಕ ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಅಲ್ಲಂ ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಮೋಹನ್ಕುಮಾರ್ ಕೊಂಡಜ್ಜಿ, ಕೆ.ಸಿ.ಕೊಂಡಯ್ಯ, ಅಬ್ದುಲ್ ಜಬ್ಬಾರ್, ಯು.ಬಿ.ವೆಂಕಟೇಶ್, ರಘು ಆಚಾರ್, ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಎಲ್ಲಾ ನೂತನ ಸದಸ್ಯರು, ಪಕ್ಷದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು, ಮುಖಂಡರು ಹಾಗೂ ಕಾರ್ಯಕರ್ತರುಗಳು, ಪಕ್ಷದ ಎಲ್ಲಾ ಅಂಗಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಎಂದರು.
.