ದಾವಣಗೆರೆ: ಮಾಜಿ ಸಂಸದ ದಿವಂಗತ ಜಿ.ಮಲ್ಲಿಕಾರ್ಜುನಪ್ಪ 20ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಜಿಎಂಎಚ್ ಚಾರಿಟಿ ಫೌಂಡೇಶನ್ನಿಂದ ನ. 29 ರಂದು ಬೃಹತ್ ಉದ್ಯೋಗ ಮೇಳವನ್ನು ಚನ್ನಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಮೇಳದಲ್ಲಿ 50ಕ್ಕೂಹೆಚ್ಚು ಕಂಪನಿಗಳು ಮತ್ತು 6 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಚಾರಿಟಿಫೌಂಡೇಶನ್ ಸದಸ್ಯ ಪ್ರಭುದೇವ್ ತಿಳಿಸಿದ್ದಾರೆ. ಅಂದು
ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ಸಂಸದ ಡಾ.ಜಿ.ಎಂ. ಸಿದ್ದೇಶ್ವರಉದ್ಯೋಗ ಮೇಳಕ್ಕೆ ಚಾಲನೆ ನೀಡುವರು. ಶ್ರೀಶೈಲಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಜಿ.ಎಂ.ಪ್ರಸನ್ನ ಕುಮಾರ್, ಟ್ರಸ್ಟ್ ಕಾರ್ಯದರ್ಶಿ, ಜಿ.ಎಂ. ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಎಂ. ಲಿಂಗರಾಜು,ಖಜಾಂಚಿ, ಬಿಜೆಪಿ ಯುವ ಮುಖಂಡ ಜಿ.ಎಸ್.ಅನಿತ್ ಕುಮಾರ್, ವಿವಿಧ ಮುಖಂಡರು ಭಾಗವಹಿಸಲಿದ್ದಾರೆ.
ಈಗಾಗಲೇ 4000ಕ್ಕೂ ಅಧಿಕ ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ ವಿದ್ಯಾರ್ಥಿಗಳಿಗೆ ಹಲವು
ಪ್ರತಿಷ್ಠಿತ ಕಂಪನಿಗಳಿಂದ ಉದ್ಯೋಗಾವಕಾಶಗಳು
ಲಭ್ಯವಿದ್ದು, 15 ಸಾವಿರದಿಂದ 35 ಸಾವಿರದವರೆಗೆ ತಿಂಗಳ ಪ್ಯಾಕೇಜ್ ನೀಡಲು ಮುಂದಾಗಿವೆ ಎಂದು ಹೇಳಿದ್ದಾರೆ.ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಟಿ.ಆರ್. ತೇಜಸ್ವಿ ಕಟ್ಟಿಮನಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆ, ಭಾವಚಿತ್ರ, ಬಯೋಡೇಟಾ ಮತ್ತು ಕನಿಷ್ಠ ಐದು ಪ್ರತಿಗಳ ತೆಗೆದುಕೊಂಡು ಬರಬೇಕು.ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಆಯ್ಕೆ ಪತ್ರವನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.



