ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಊಟ ಮಾಡಿದ 25 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿ ಸಂತೆಬೆನ್ನೂರು ಬಳಿಯ ವಸತಿ ಶಾಲೆಯಲ್ಲಿ ನಡೆದಿದೆ.
ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಅಸ್ವಸ್ಥಗೊಂಡಿರುವ ಐವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ
ಹಾಸ್ಟೆಲ್ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿದ್ದು, ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ. ವಸತಿ ನಿಲಯದ ವಾರ್ಡನ್ ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ.



