ಡಿವಿಜಿ ಸುದ್ದಿ, ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಆದಿತ್ಯರಾವ್ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು. ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಂಗಳೂರು ವಿಮಾನನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು.
1/3— Siddaramaiah (@siddaramaiah) January 22, 2020
ಈ ಕುರಿತು ಟ್ವೀಟ್ ಮಾಡಿರುವ ಅವರು, ನಿರ್ದಿಷ್ಟ ಸಮುದಾಯದ ಬಗ್ಗೆ ಪೂರ್ವಗ್ರಹ ಹೊಂದಿರುವ ಸಂಘ ಪರಿವಾರದ ನಾಯಕರು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೂ ಕೋಮು ಬಣ್ಣ ಬಳಿಯುತ್ತಿದ್ದಾರೆ. ಇದರಿಂದ ಅಲ್ಲಿನ ಶಾಂತಿ ವ್ಯವಸ್ಥೆ ಕದಡಲು ಕಾರಣ. ತಮ್ಮ ಅಜೆಂಡಾಕ್ಕೆ ಬಳಸಲಾಗದ ಪ್ರಕರಣಗಳ ಬಗ್ಗೆ ಅವರ ಮೌನವೇ ಅವರ ದುರುದ್ದೇಶಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಹರಿಹಾಯ್ದಿದ್ದಾರೆ.
ಪೊಲೀಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಲು ಹೋಗದೆ ವೃತ್ತಿಪರತೆಯಿಂದ ಕೆಲಸ ಮಾಡಬೇಕು. ಮಂಗಳೂರು ಪೊಲೀಸರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅನಗತ್ಯವಾಗಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲು ಕಾರಣವಾಗುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಪೊಲೀಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಲು ಹೋಗದೆ ವೃತ್ತಿಪರತೆಯಿಂದ ಕೆಲಸ ಮಾಡಬೇಕು. ಮಂಗಳೂರು ಪೊಲೀಸರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅನಗತ್ಯವಾಗಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲು ಕಾರಣವಾಗುತ್ತಿದ್ದಾರೆ.
3/3— Siddaramaiah (@siddaramaiah) January 22, 2020



