ದಾವಣಗೆರೆ: ಚನ್ನಗಿರಿ ಕ್ಷೇತ್ರದ ಶಾಸಕ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೋ ಅಥವಾ ಬೇರೆ ಪಕ್ಷದಲ್ಲಿ ಇದ್ದಾರೋ ಗೊತ್ತಿಲ್ಲ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ . ಮಲ್ಲಿಕಾರ್ಜುನ್, ಶಾಸಕರ ಹೆಸರು ಹೇಳದೇ ಕಿಡಿಕಾರಿದ್ದಾರೆ.
ತಾಲ್ಲೂಕಿನ ಮಾವಿನಹೊಳೆಯ ಮಹಾರುದ್ರಸ್ವಾಮಿ ದೇವಸ್ಥಾನ ಕಾರ್ತಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಿಸುತ್ತದೆ. ಇದುವರೆಗೆ ಯಾರನ್ನೂ ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಪಕ್ಷ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತದೆ ಎಂದರು.
ಚನ್ನಗಿರಿ ಕ್ಷೇತ್ರದ ಶಾಸಕ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೋ ಅಥವಾ ಬೇರೆ ಪಕ್ಷದಲ್ಲಿ ಇದ್ದಾರೋ ಗೊತ್ತಿಲ್ಲ..?ವಿನಯ್ ಕುಮಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಶಾಸಕರು , ಹೋದ ಕಡೆ ಹೇಳುಕೊಂಡು ಓಡಾಡುತ್ತಿದ್ದಾರೆ. ಇದು ತಪ್ಪು, ತಮಗೆ ತೋಚಿದ್ದನ್ನು ಹೇಳಿಕೆ ಕೊಟ್ಟರೆ ಗೊಂದಲಕ್ಕೆ ಕಾರಣವಾಗುತ್ತೆ. ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಚ್ಚರಿಸಿದರು.



