ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಶಾಕ್ ನಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ವೃದ್ಧೆ ಮೃತ ರ್ದುದೈವಿ ಆಗಿದ್ದಾರೆ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ತಂತಿ ಕಟ್ ಆಗಿದ್ದನ್ನು ನೋಡದೆ ಮಹಿಳೆ ತುಳಿದಿದ್ದರಿಂದ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿದ್ಯುತ್ ಅವಘಡಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.



