ದಾವಣಗೆರೆ: ಗೇರ್ ಸೈಕಲ್ ಕಳ್ಳತನ ಮಾಡುತಗತಿದ್ದ ಮೂವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ1,06,000 ರೂ. ಬೆಲೆ ಬಾಳುವ 5 ಗೇರ್ ಸೈಕಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿಯ ಕೆ.ಜೆ. ದರ್ಶನ್ (19), ದಾವಣಗೆರೆಯ ಓಂಕಾರ್ (18) ಹಾಗೂ ಯಶವಂತ (19) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಕಳ್ಳತನ ಮಾಡಿದ್ದ ಒಟ್ಟು 1,06,000 ರೂ. ಬೆಲೆ ಬಾಳುವ 5 ಗೇರ್ ಸೈಕಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಆರೋಪಿಗಳಿಂದ ವಿದ್ಯಾನಗರ ಪೊಲೀಸ್ ಠಾಣೆಯ ಒಟ್ಟು 3 ಪ್ರಕರಣಗಳು ಪತ್ತೆಯಾಗಿವೆ.
ದಾವಣಗೆರೆಯ ಆಂಜನೇಯ ಬಡಾವಣೆಯ 8 ನೇ ಕ್ರಾಸ್ ನ ವಾಸಿ ರಾಜೇಶ್ವರಿ ಎಂಬುವವರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 25,000 ರೂ ಬೆಲೆ ಬಾಳುವ ಸೈಕಲ್ ಅನ್ನು ನ.1 ರಂದು ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದು, ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ನೀಡಿದ್ದರು.
ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಪ್ರಭಾವತಿ. ಸಿ. ಶೇತಸನದಿ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪಿ.ಎಸ್.ಐ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು. ಈ ತಂಡವು ಆರೋಪಿಗಳನ್ನು ಪತ್ತೆ ಮಾಡಿ ಸೈಕಲ್ ಗಳನ್ನು ವಶಕ್ಕೆ ಪಡೆದಿದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



