ದಾವಣಗೆರೆ: ಕ್ಯಾಂಪಸ್ ಆಯ್ಕೆಯಾದ ಜಿಎಂಐಟಿ ಮೆಕ್ಯಾನಿಕಲ್ ವಿಭಾಗದ 103 ವಿದ್ಯಾರ್ಥಿಗಳು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಎರಡು ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಇಂಜಿನಿಯರಿಂಗ್ ಮೆಕಾನಿಕಲ್ ವಿಭಾಗ ಮತ್ತು ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದಿಂದ ಒಟ್ಟು 103 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಗೇಪಿ ಎಂಜಿನ್ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದ 28 ವಿದ್ಯಾರ್ಥಿಗಳು ಮತ್ತು ಡಿಪ್ಲೋಮೋ ಮೆಕ್ಯಾನಿಕಲ್ ವಿಭಾಗದ 21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅದೇ ದಿವಗಿ ಟ್ರಾನ್ಸ್ಮಿಷನ್ ಸಿಸ್ಟಮ್ಸ್ ಸಿರಸಿ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಇಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದ 26 ವಿದ್ಯಾರ್ಥಿಗಳು ಮತ್ತು ಡಿಪ್ಲೋಮೋ ಮೆಕ್ಯಾನಿಕಲ್ ವಿಭಾಗದಿಂದ 28 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಇದುವರೆಗೂ ಒಟ್ಟು 210 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದಾರೆ. ಇನ್ನೂ ಹಲವು ಪ್ರತಿಷ್ಠಿತ ಕಂಪನಿಗಳ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ತರಬೇತಿ ನೀಡಿ ಕೈಗಾರಿಕೆಗಳಿಗೆ ತಕ್ಕಂತೆ ತಯಾರು ಮಾಡುವ ಜವಾಬ್ದಾರಿಯನ್ನು ಹೊಂದಿದ್ದೇವೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.

ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತಾಧಿಕಾರಿ ವೈ ಯು ಸುಭಾಷ್ ಚಂದ್ರ , ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಸಂಜಯ್ ಪಾಂಡೆ ಎಂಬಿ, ಜಿ ಎಂ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ. ಶ್ರೀಧರ್ ಬಿ ಆರ್, ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ್ ಸಿವಿ, ಪ್ಲೇಸ್ಮೆಂಟ್ ಸಂಯೋಚಕ ಪ್ರೊ. ಪ್ರಶಾಂತ್, ಡಿಪ್ಲೋಮೋ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರವೀಣ್, ಪ್ಲೇಸ್ಮೆಂಟ್ ಸಂಯೋಜಕ ಪ್ರೊ. ಯಾಸ್ಮಿನ್, ಪ್ಲೇಸ್ಮೆಂಟ್ ಸಂಯೋಜಕರಾದ ಆಕಾಶ್ ಗೌಡ, ಸುನಿಲ್ ಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *