Connect with us

Dvgsuddi Kannada | online news portal | Kannada news online

ಸಂಸತ್ ಭದ್ರತಾ ಲೋಪ; ಅನಿಲ ಹೊರಸೂಸುವ ವಸ್ತು ಎಸೆದ ಆರೋಪಿಗಳು; ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಸಿಕ್ಕತ್ತು ಪಾಸ್​..!; ಇಬ್ಬರ ಬಂಧನ

IMG 20231213 162900

ಪ್ರಮುಖ ಸುದ್ದಿ

ಸಂಸತ್ ಭದ್ರತಾ ಲೋಪ; ಅನಿಲ ಹೊರಸೂಸುವ ವಸ್ತು ಎಸೆದ ಆರೋಪಿಗಳು; ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಸಿಕ್ಕತ್ತು ಪಾಸ್​..!; ಇಬ್ಬರ ಬಂಧನ

ನವದೆಹಲಿ: ಸಂಸತ್ ಭವನದ ಭದ್ರತೆಯಲ್ಲಿ ಭದ್ರತಾ ಲೋಪವಾಗಿರುವ ಘಟನೆ ಇಂದು ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗ ಸಂದರ್ಶಕರ ಗ್ಯಾಲರಿಯಲ್ಲಿ‌ ಕುಳಿತಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ದಿಢೀರನೆ ಸದನಕ್ಕೆ ಹಾರಿ ಅವಾಂತರ ಸೃಷ್ಟಿಸಿ ಭಯದ ವಾತಾವರಣ ನಿರ್ಮಾಣ ಮಾಡಿದರು. ಆರೋಪಿಗಳನ್ನು ಈಗಾಗಲೇ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಆರೋಪಿಗಳಿಗೆ ಪಾಸ್​ ಸಿಕ್ಕಿತ್ತು ಎಂಬ ಮಾಹಿತಿ ಲಭ್ಯವಾಗಿದೆ‌. ಈ ಹಿನ್ನೆಲೆ ಘಟನೆಗೆ ಕಾರಣ ಏನು..? ಆರೋಪಿಗಳು ಯಾರು ಎಂಬುದು ವಿಚಾರಣೆ ಬಳಿಕ ಗೊತ್ತಾಗಲಿದೆ.

ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷ. ಇದೇ ದಿನ ಲೋಕಸಭೆಯಲ್ಲಿ ಭದ್ರತಾಲೋಪ ಸಂಭವಿಸಿದದೆ‌. ಅನಿಲ ಹೊರಸೂಸುವ ವಸ್ತು ಎಸೆದರು ಕೂಡಲೇ ಭದ್ರತಾ ಸಿಬ್ಬಂದಿಗಳು ಹೊರಗೆ ಎಳೆದು ತಂದಿದ್ದಾರೆ. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಓರ್ವ ಪುರುಷ ಮತ್ತು ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನೀಲಂ (42) ಮತ್ತು ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ.

ಈ ಆರೋಪಿಗಳು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಆಫೀಸ್​​ನಿಂದ ಪಾಸ್​​ ಪಡೆದು ಸಂಸತ್​ ಭವನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರತಾಪ್ ಸಿಂಹ ಕಛೇರಿಯಿಂದ ಹೇಗೆ ಪಾಸ್​ ಪಡೆದಿದ್ದರು. ಇವರ ಇಬ್ಬರ ಉದ್ದೇಶ ಏನಾಗಿತ್ತು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top