ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ; ಇಂದಿನ ಕನಿಷ್ಠ, ಗರಿಷ್ಠ ದರದಲ್ಲಿ ಎಷ್ಟು ಏರಿಕೆಯಾಗಿದೆ ಗೊತ್ತಾ..? ಇಲ್ಲಿದೆ ವಿವರ…

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆಯಲ್ಲಿ‌ ಕಳೆದ 10 ದಿನದಿಂದ ಸತತ ಏರಿಕೆ ಕಾಣುತ್ತಿದೆ. ಇಂದು (ಡಿ.18) ದಿನ 300 ರೂ. ಗಳಷ್ಟು ಚೇತರಿಕೆ ಕಂಡಿದೆ. ಇವತ್ತು ರಾಶಿ ಅಡಿಕೆ ಕ್ವಿಂಟಲ್ ಗೆ ಗರಿಷ್ಠ‌ ಬೆಲೆ 48,481 ರೂಪಾಯಿಗಳಾಗಿದ್ದು, ಕನಿಷ್ಠ ಬೆಲೆ 46,899 ರೂ. ಆಗಿದೆ. ಡಿಸೆಂಬರ್ ತಿಂಗಳಲ್ಲಿ ವರ್ಷದ ಕೊನೆಯ ಕೊಯ್ಲು ಆಗಿದ್ದು, ಈ ತಿಂಗಳಲ್ಲಿ ರಾಶಿ ಅಡಿಕೆ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ 50 ಸಾವಿರ ಗಡಿದಾಟಿದರೂ ಅಚ್ಚರಿ ಪಡಬೇಕಿಲ್ಲ.

ಈ ವರ್ಷದ ಅಡಿಕೆ ಬೆಲೆಯಲ್ಲಿ ಸಾಕಷ್ಟು ಏರಿಳಿತ ಕಂಡಿದ್ದರೂ, ವರ್ಷದ ಕೊನೆ ತಿಂಗಳಲ್ಲಿ ಮತ್ತೆ ಏರಿಕೆಯಾಗಿದ್ದು, ರೈತರರಲ್ಲಿ ಸಂತಸ ಮೂಡಿದೆ. 2023ರ ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಂಡು 48 ಸಾವಿರ ತಲುಪಿತ್ತು. ಸೆಪ್ಟೆಂಬರ್‌ ಮೊದಲ 15 ದಿನ ‌46 ಸಾವಿರಕ್ಕೆ ಕುಸಿದು ಆತಂಕ ಉಂಟು ಮಾಡಿತ್ತು. ಆದರೆ, ಅಕ್ಟೋಬರ್ ‌ಕೊನೆಯ ವಾರ ಮತ್ತೆ 47,800 ಏರಿಕೆ ಕಂಡಿತ್ತು. ನವೆಂಬರ್ ನಲ್ಲಿ 47 ಸಾವಿರಕ್ಕೆ ತಲುಪಿ ಸ್ಥಿರವಾಗಿತ್ತು. ಡಿಸೆಂಬರ್ ಮೊದಲ ವಾರದಲ್ಲಿಯೂ ಸಹ 100, 200 ರೂಪಾಯಿ ಏರಿಳಿತ ಕಂಡರೂ 47 ಸಾವಿರ ಗಡಿದಾಟಿ ಬೆಲೆ ಸ್ಥಿರವಾಗಿತ್ತು. ಇದೀಗ ಕಳೆದ 10 ದಿನದಿಂದ ಸತತ ಏರಿಕೆ ಕಂಡು 49 ಸಾವಿರ ಗಡಿಯತ್ತ ಬಂದಿದೆ‌

ಈ ವರ್ಷ ಮುಂಗಾರು ಮಳೆ‌ ಕೈ‌ಕೊಟ್ಟಿದ್ದು, ಮಳೆಗಾಲದಲ್ಲಿಯೇ ಬೇಸಿಗೆ ವಾತಾವರಣ ನಿರ್ಮಾಣವಾಗಿತ್ತು. ಇನ್ನೂ ಜನವರಿ 15ರ ನಂತರ ( ಸಂಕ್ರಾಂತಿ) ಸೂರ್ಯ ಪತ ಬದಲಿಸಿದ್ದು ಬೇಸಿಗೆ ಅಧಿಕೃತವಾಗಿ ಶುರುವಾಗಲಿದೆ. ಈ ಸಲ ಮಳೆ ಕೊರತೆಯಿಂದ ಬೇಸಿಗೆಯಲ್ಲಿ ಬಿಸಿಲಿನ ಪ್ರಮಾಣ ಯಾವ ಮಟ್ಟಕ್ಕೆ ಇರಲಿದೆ ಎಂದು ನಿರೀಕ್ಷೆಯೂ ಕಷ್ಟವಾಗಿದೆ. ಈಗಾಗಲೇ ಅಂತರ್ಜಲ ಮಟ್ಟ ಕುಸಿತ ಕಂಡಿದ್ದು, ಬೇಸಿಗೆಯಲ್ಲಿ ಅಡಿಕೆ ತೋಟ ಉಳಿಸಿಕೊಳ್ಳುವುದೇ ರೈತರಿಗೆ ಸವಾಲಾಗಿದೆ. ಅದರಲ್ಲೂ ಏಪ್ರಿಲ್, ಮೇ ಎರಡು ತಿಂಗಳು ಅಡಿಕೆ ಬದುಕಿಸಿಕೊಂಡ್ರೆ ಸಾಕು ಎನ್ನುವಂತಾಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಡಿ.18ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 46,899, ಗರಿಷ್ಠ ಬೆಲೆ 48,481 ಹಾಗೂ ಸರಾಸರಿ ಬೆಲೆ 48,0 47 ರೂ.ಗೆ ಮಾರಾಟವಾಗಿದೆ. ಇನ್ನೂ ಬೆಟ್ಟೆ ಅಡಿಕೆ ಗರಿಷ್ಠ 38,505 ರೂ‌ಗೆ ಮಾರಾಟವಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *