Connect with us

Dvgsuddi Kannada | online news portal | Kannada news online

ಡಿ.31ರೊಳಗೆ KYC ಕಡ್ಡಾಯ; KYC ಮಾಡಿಸದಿದ್ರೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಕಟ್ ಎಂಬ ವಾಟ್ಸಾಪ್ ಸುಳ್ಳು ಸಂದೇಶ ನಂಬಿ, ಕೆವೈಸಿ ಮಾಡಿಸಲು ಗ್ಯಾಸ್ ಏಜೆನ್ಸಿ‌ ಮುಂದೆ ಮುಗಿಬಿದ್ದ ಜನ..!

IMG 20231221 150156

ಪ್ರಮುಖ ಸುದ್ದಿ

ಡಿ.31ರೊಳಗೆ KYC ಕಡ್ಡಾಯ; KYC ಮಾಡಿಸದಿದ್ರೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಕಟ್ ಎಂಬ ವಾಟ್ಸಾಪ್ ಸುಳ್ಳು ಸಂದೇಶ ನಂಬಿ, ಕೆವೈಸಿ ಮಾಡಿಸಲು ಗ್ಯಾಸ್ ಏಜೆನ್ಸಿ‌ ಮುಂದೆ ಮುಗಿಬಿದ್ದ ಜನ..!

ಬೆಂಗಳೂರು: ಡಿಸೆಂಬರ್ 31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಕಡ್ಡಾಯ. ಇಲ್ಲವಾದಲ್ಲಿ ಗೃಹಬಳಕೆ ಸಿಲಿಂಡರ್ ದರ, ಕಮರ್ಷಿಯಲ್ ದರವಾಗಿ ಬದಲಾಗಲಿದ್ದು, ಸಿಲಿಂಡರ್ ಬೆಲೆ 903 ರೂ. ರಿಂದ 1400 ರೂ ಆಗಲಿದೆ ಎಂಬ ಸುದ್ದಿ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದೆ. ಈ ಸಂದೇಶ ನೋಡುತ್ತಿದ್ದಂತೆ ಗ್ರಾಹಕರು ಕೆವೈಸಿ ಮಾಡಿಸಲು ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಮುಗಿಬಿದ್ದಿದ್ದಾರೆ.

ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೆದುಕೊಂಡು ತಮ್ಮ ಗ್ಯಾಸ್ ನೀಡಿರುವ ಏಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಆಗ ಮಾತ್ರ ಜನವರಿ 1 ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲಿಂಡರ್ ಗೆ 903ರಿಂದ 500 ರೂಗೆ ಸಿಗುತ್ತದೆ. ಒಂದು ವೇಳೆ KYC ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಕಮರ್ಷಿಯಲ್ ಆಗಿ ಮಾರ್ಪಟ್ಟು 1400 ಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ಸಂದೇಶ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿ ಎಲ್ಲಾ ಗ್ರಾಹಕರಿಗೂ ಅನ್ವಯವಾಗುವುದಿಲ್ಲ ಎಂಬುದು ಏಜೆನ್ಸಿಗಳು ಸ್ಪಷ್ಟಪಡಿಸಿವೆ. ಇದು ಉಜ್ವಲ ಯೋಜನೆ ಗ್ರಾಹಕರಿಗೆ ಮಾತ್ರ ಅನ್ವಯ ಎಂಬುದು ಗೊತ್ತಾಗಿದೆ.

ಉಜ್ವಲ ಯೋಜನೆಯಡಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರು ಮಾತ್ರ ಡಿಸೆಂಬರ್ 31ರೊಳಗೆ KYC ಮಾಡಿಸಬೇಕು. ಉಳಿದ ಗ್ರಾಹಕರು KYC ಮಾಡಿಸಬೇಕಾದ ಅಗತ್ಯವಿಲ್ಲ. ಒಂದು ವೇಳೆ ಕೆವೈಸಿ ಮಾಡಿಸದಿದ್ದರೆ ಕಮರ್ಷಿಯಲ್ ಆಗಿ ಬದಲಾಗುತ್ತದೆ ಎಂಬುದು ಸುಳ್ಳು. ಅಂತವರು ಗೃಹಬಳಕೆಯ ಗ್ರಾಹಕರಾಗಿಯೇ ಮುಂದುವರೆಯುತ್ತಾರೆ. ಅವರಿಗೆ ಸಿಗುತ್ತಿರುವ ಸಣ್ಣಪುಟ್ಟ ಸಬ್ಸಿಡಿ ನಿಂತುಹೋಗಬಹುದು ಅಷ್ಟೇ…

ಇನ್ನು ಈ ಬಗ್ಗೆ ಉಜ್ವಲ ಯೋಜನೆಯ ನೋಡಲ್ ಅಧಿಕಾರಿ ರಾಹುಲ್ ಕೂಡ ಸ್ಪಷ್ಟನೆ ನೀಡಿದ್ದು, ವೈರಲ್ ಆಗಿರುವ ವಾಟ್ಸಪ್ ಸಂದೇಶದಲ್ಲಿ ಹುರುಳಿಲ್ಲ. ಉಜ್ವಲ ಯೋಜನೆಯ ಗ್ರಾಹಕರಿಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿದೆ. ಅವರು ಮಾತ್ರ ಆಧಾರ ದೃಢೀಕರಿಸಬೇಕು. ಹಾಗಾಗಿ ಉಳಿದ ಗ್ರಾಹಕರು ಗೊಂದಲಕ್ಕೊಳಗಾಗುವುದು ಬೇಡ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 31ರೊಳಗೆ ಉಜ್ವಲ ಯೋಜನೆಯಡಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರು ಮಾತ್ರ KYC ಮಾಡಿಸಿದರೆ ಅವರಿಗೆ ಸಬ್ಸಿಡಿ ಮುಂದುವರೆಯುತ್ತದೆ. ಉಳಿದ ಗ್ರಾಹಕರಿಗೆ ಇದು ಅನ್ವಯವಾಗುವುದಿಲ್ಲ ಎಂಬುದು ಸ್ಪಷ್ಟಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top