ಸಾಲ ಮನ್ನಾಕ್ಕಾಗಿ ರೈತರು ಮೇಲಿಂದ ಮೇಲೆ ಬರ ಬೀಳಲಿ ಎಂದು ಬಯಸುತ್ತಾರೆ; ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ: ಸಾಲ ಮನ್ನಾಕ್ಕಾಗಿ ರೈತರು ಮೇಲಿಂದ ಮೇಲೆ ಬರ ಬೀಳಲಿ ಎಂದು ಬಯಸುತ್ತಾರೆ ಎಂದು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ಸಹಕಾರ ಸಂಘದ ಬೆಳ್ಳಿ ಮಹೋತ್ಸವದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ರೈತರ ಬಗ್ಗೆ ಹಗುರವಾಗಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಲಿಂದ ಮೇಲೆ ಬರ ಬೀಳಲಿ ಎಂದು ರೈತರು ನಿರೀಕ್ಷೆ ಮಾಡುತ್ತಾರೆ. ಬರಗಾಲ ಬಂದರೆ ಸಾಲ ಮನ್ನಾ ಆಗುತ್ತದೆ ಎಂದು ಬಯಸುತ್ತಾರೆ. ಈ ರೀತಿ ಬಯಸಬಾರದು ಎಂದಿದ್ದಾರೆ.ಕೃಷ್ಣಾ ನದಿಯಿಂದ ಪುಕ್ಕಟೆ ನೀರು ಸಿಗುತ್ತಿದೆ. ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಈವರೆಗೆ ಮುಖ್ಯಮಂತ್ರಿ ಆದವರೆಲ್ಲ ಉಚಿತವಾಗಿ ಬೀಜ- ಗೊಬ್ಬರ ನೀಡಿದ್ದಾರೆ. ಸದ್ಯ ರೈತರಿಗೆ ಇರುವುದು ಬರಗಾಲ ಬರಲಿ ಎಂಬ ಆಸೆ ಮಾತ್ರ.ರೈತರು ಬಯಸಿದರೂ ಬಯಸದಿದ್ದರೂ ಮೂರು ವರ್ಷಕ್ಕೊಮ್ಮೆ ಬರಗಾಲ ಬಂದೇ ಬರುತ್ತದೆ. ಈ ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಬಡ್ಡಿ ಮನ್ನಾ ಮಾಡುವ ಹೇಳಿಕೆ ನೀಡಿದ್ದಾರೆ. ರೈತರು ಇಂತಹ ನಿರೀಕ್ಷೆ ಇಟ್ಟುಕೊಳ್ಳಬಾರದು ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *