ದಾವಣಗೆರೆ: ರೀಲ್ಸ್ ‌ಮೂಲಕ ಮೋಡಿ; ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಮದುವೆ…!!!; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ…

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ‌ಮೂಲಕ ಮೋಡಿ ಮಾಡಿ, ತಮ್ಮ ಪತ್ನಿ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಮದುವೆಯಾಗಿದ್ದಾಳೆಂದು ಪತಿರಾಯ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾಪತ್ತೆಯಾಗಿದ್ದ ಪತ್ನಿ ಬೇರೊಬ್ಬನನ್ನು ಮದುವೆಯಾಗಿರುವುದು ಸಾಮಾಜಿಕ ಜಾಲತಾಣದ ಪೋಸ್ಟ್‌ನಿಂದ ದಾವಣಗೆರೆ ಮೂಲದ ಮೂತನೇ ಪತಿಗೆ ಗೊತ್ತಾಗಿದೆ. ಸ್ನೇಹಾ ಅಲಿಯಾಸ್ ನಿರ್ಮಲಾ, ದಾವಣಗೆರೆಯ ಪ್ರಶಾಂತ್ ಎಂಬಾತನಿಗೆ ವಂಚಿಸಿದ್ದಾಳೆ.‌ 2022 ರ ಫೆಬ್ರವರಿಯಲ್ಲಿ ಸ್ನೇಹಾಳನ್ನು ವಿವಾಹವಾಗಿದ್ದು, ಒಂದೂವರೆ ವರ್ಷಗಳ ಕಾಲ ಒಟ್ಟಿಗೆ ಇದ್ದರು. ಸೋಷಿಯಲ್ ಮೀಡಿಯಾದಲ್ಲಿ ಆಕೆಯನ್ನು ಭೇಟಿಯಾದ ನಂತರ ಪ್ರೀತಿಸಿ ಮದುವೆಯಾಗಿದ್ದೆ ಎಂದು ಪ್ರಶಾಂತ್ ಹೇಳಿದ್ದಾರೆ.

ಮೂರು ತಿಂಗಳ ಹಿಂದೆ ಸ್ನೇಹಾ ತಾನು ಗರ್ಭಿಣಿ ಎಂದು ಪೋಷಕರ ಮನೆಗೆ ಹೋಗಿದ್ದಳು ಆದರೆ ನಂತರ ನಾಪತ್ತೆಯಾಗಿದ್ದಳು.ಮತ್ತೊಂದು ಮದುವೆಯ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಇದರಿಂದಾಗಿ ಆಕೆ ಮದುವೆಯಾಗಿರುವುದು ಪ್ರಶಾಂತ್ ಗೊತ್ತಾಗಿದೆ.ಡಿಸೆಂಬರ್ 21 ರಂದು ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಶಾಂತ್ ನಾಪತ್ತೆ ದೂರು ದಾಖಲಿಸಿದ್ದರು. ಇದಾದ ಕೆಲವೇ ದಿನಗಳ ನಂತರ ಆಕೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆಯಾಗಿರುವುದು ಗೊತ್ತಾಗಿದೆ.

ಮಗುವಿಗೆ ಗರ್ಭಪಾತ ಮಾಡಿಸಿ, ನನಗೆ ತಿಳಿಸದೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದಾಳೆ. ಸ್ನೇಹಾ ಮಂಡ್ಯ ಜಿಲ್ಲೆಯ ನರಹಳ್ಳಿ ನಿವಾಸಿ. ಪ್ರಶಾಂತ್ ನನ್ನು ಮದುವೆಯಾಗುವ ಮುನ್ನ ಆಕೆ ಇನ್ನಿಬ್ಬರನ್ನು ಮದುವೆಯಾಗಿದ್ದಳು ಎನ್ನಲಾಗಿದೆ. ಈಗ ಬೆಂಗಳೂರಿನ ನಿವಾಸಿ ರಘು ಎಂಬಾತನನ್ನು ಮದುವೆಯಾಗಿದ್ದಾಳೆ.

ನಾನು ಮದುವೆಯಾಗುವಾಗ ಅವಳ ಹಿಂದಿನ ಮದುವೆಗಳ ಬಗ್ಗೆ ಅವಳ ಕುಟುಂಬದ ಯಾರೂ ನನಗೆ ಹೇಳಲಿಲ್ಲ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಾ ಸಕ್ರಿಯರಾಗಿದ್ದಾಳೆ. ಇಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾಳೆ. ನನ್ನಂತೆ ಇತರರಿಗೆ ವಂಚನೆ ಮಾಡದಂತೆ ಆಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನುತ್ತಾರೆ ಪ್ರಶಾಂತ್.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *