ದಾವಣಗೆರೆ: ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳಲ್ಲಿ ಪ್ರಾಧಿಕಾರ ಮಳಿಗೆ ಶೇ.50%ರ ರಿಯಾಯಿತಿ ದರಗಳಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು.ಪುಸ್ತಕ ಪ್ರಿಯರು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂ.08022107705), ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಪಡೆಯಬಹುದು.
ಪ್ರಾಧಿಕಾರದ ಆನ್ಲೈನ್ www.kannadapustakapradhikara.com ಮೂಲಕವು ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಪಡೆಯಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.



