ದಾವಣಗೆರೆ: ಕಾರು- ಬೈಕ್ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೊಬ್ಬನಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಅರಿಶಿಣಗುಂಡಿ ಗೇಟ್ ಸಮೀಪ ನಡೆದಿದೆ.
ಬೈಕ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗೌರಮ್ಮನಹಳ್ಳಿ ಗ್ರಾಮದ ಹನುಮಂತಪ್ಪ (35)
ಮೃತಪಟ್ಟಿದ್ದು, ಹಿಂಬದಿ ಸವಾರ ಮಾರುತಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ದೊಣೆಹಳ್ಳಿ ಮಾರ್ಗವಾಗಿ ಭರಮಸಾಗರಕ್ಕೆ ಹೋಗುತ್ತಿತ್ತು. ಈ ವೇಳಗೆ ಈ ಭೀಕರ ಅಪಘಾತವಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಗಳೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಜಗಳೂರು ಪಟ್ಟಣದ ಪೊಲೀಸ್
ಠಾಣೆಯಲ್ಲಿ ದೂರು ದಾಖಲಾಗಿದೆ.



