ತುಮಕೂರು: ಅಯೋಧ್ಯೆಯಲ್ಲಿ ನಾಳೆಯ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಸಿಎಂ , ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ ಎಂದು ತಿಳಿಸಿದರು.
ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ವಿವಿಧ ರಾಜ್ಯಗಳು ಸರ್ಕಾರಿ ರಜೆ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು.



