Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ

IMG 20240122 150438

ದಾವಣಗೆರೆ

ದಾವಣಗೆರೆ: ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ

ದಾವಣಗೆರೆ: ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಇಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ RAF ( Rapid Action Force) ತಂಡ ಪಥ ಸಂಚಲನ ನಡೆಸಲಾಯಿತು.

ಪಥ ಸಂಚಲನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ ಜಿ, ದಾವಣಗೆರೆ ನಗರ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಪೊಲೀಸ್ ನಿರೀಕ್ಷಕ ಗುರುಬಸವರಾಜ್, ಶಶಿಧರ್, ಬಾಲಚಂದ್ರನಾಯ್ಕ್, ಇಮ್ರಾನ್ ಬೇಗ್, ಆರ್ ಎಸ್ ಐ ಅಣ್ಣಿಗೇರಿ, RAF ತಂಡದ ಕಮಾಂಡೆಂಟ್ ಸುನೀಲ್ ಕುಮಾರ್ , RAF ತುಕಡಿಯ PI ಸುಂದರನ್ ರವರು RAF ಸಿಬ್ಬಂದಿಗಳು ಭಾಗವಹಿಸಿದ್ದರು.

RAF (Rapid Action Force) ತಂಡ ಪಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಚೌಕಿಪೇಟೆ, ಹಾಸಬಾವಿ ವೃತ್ತ, ಮದೀನಾ ಆಟೋ ಸ್ಟ್ಯಾಂಡ್, ಬೇತೂರ್ ರಸ್ತೆ, ಕೆ ಆರ್ ರಸ್ತೆ, ಮಂಡಿಪೇಟೆ ರಸ್ತೆ, ಕೆ ಆರ್ ಮಾರ್ಕೇಟ್, ಇಸ್ಲಾಂ ಪೇಟೆ, ಪಿ ಬಿ ರಸ್ತೆ, ಶಿವಪ್ಪ ಸರ್ಕಲ್, ದುರ್ಗಾಂಬಿಕಾ ದೇವಸ್ಥಾನ, ಹೆಚ್ ಕೆ ಆರ್ ಸರ್ಕಲ್ ಮೂಲಕ ಸಾಗಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ನಡೆಸಲಾಯಿತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top