ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್ ನಿಂದ 2024ರ ದುರ್ಗಾಂಬಿಕಾ ಜಾತ್ರಾ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಾಳೆ (ಜ.24) ದೇವಸ್ಥಾನದ ಪ್ರಸಾದ ನಿಲಯದಲ್ಲಿಕರೆಯಲಾಗಿದೆ.
ಅಂದು ಮಧ್ಯಾಹ್ನ 12.30ಕ್ಕೆ ಟ್ರಸ್ಟ್ ಗೌರವಾಧ್ಯಕ್ಷರು, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು, ದೇವಸ್ಥಾನದ ಪುರೋಹಿತರಾದ ನಾಗರಾಜ ಜೋಯಿಸ್ ಜಾತ್ರೆ ಕುರಿತು ವಿವರಣೆ ನೀಡುವರು ಎಂದು ದೇವಸ್ಥಾನದ ಧರ್ಮದರ್ಶಿ ಗೌಡರ ಚನ್ನಬಸಪ್ಪ ತಿಳಿಸಿದ್ದಾರೆ.



