ದಾವಣಗೆರೆ: ರಾಮ ಮಂದಿರ ಉದ್ಘಾಟನೆ ವಿಚಾರ; ಸಾಮಾಜಿಕ ಜಾಲತಾಣಗಳಲ್ಲಿ ಅಕ್ಷೇಪರ್ಹ ಪೋಸ್ಟ್ ಸಂಬಂಧ ಎರಡು ಪ್ರಕರಣ ದಾಖಲು, ಇಬ್ಬರು ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಕ್ಷೇಪರ್ಹ ಪೋಸ್ಟ್ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ಎರಡು ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಜ.23ರಂದು ರಾಮಮಂದಿರ ಉದ್ಘಾಟನೆ ರಜೆ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನವಾಗಿ ಮಾತಾನಾಡಿ ವಾಯ್ಸ್ ಮೆಸೇಜ್ ಅನ್ನು ವಾಟ್ಸ್ ಆಫ್ ಗ್ರೂಪ್ನಲ್ಲಿ ಹಾಕಿದ್ದು,ಇದು ವೈರಲ್ ಆಗಿತ್ತು. ಈ ವಾಯ್ಸ್ ಮೆಸೇಜ್ ಮಾಡಿದವರ ಮೊಬೈಲ್ ನಂಬರ್ ಮಾಹಿತಿ ಸಂಗ್ರಹಿಸಿ, ಗ್ರೂಪ್ ನಲ್ಲಿ ಶೇರ್ ಮಾಡಿದ್ದ ವ್ಯಕ್ತಿಯನ್ನು ಕೆಟಿಜೆ ನಗರ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.‌ ಆರೋಪಿ ಮುಖ್ಯಮಂತ್ರಿಗೆ ಅವಾಚ್ಯ ಶಬ್ದಗಳಿಂದ ಬೈದಾಡಿ ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉಂಟುಮಾಡುವ ವಾಯ್ಸ್ ಮೆಸೇಜ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದನು. ಆರೋಪಿತನ ವಿರುದ್ದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಕೈಗೊಳ್ಳಲಾಗಿರುತ್ತದೆ.

ಮತ್ತೊಂದು ಪ್ರಕರಣದಲ್ಲಿ ಜ.23ರಂದು ದಾವಣಗೆರೆಯ ನಿಟುವಳ್ಳಿಯ ಯುವಕನೋರ್ವ ಮದೀನಾದ ಮಸೀದಿಯ ಚಿತ್ರವನ್ನು ಬಳಸಿ ವಿಡಿಯೋ ಮಾಡಿ ಅದನ್ನು ತನ್ನ ಹಾಗೂ ತನ್ನ ಗೆಳಯರ ಮೊಬೈಲ್ ಗಳ ಮುಖಾಂತರ ವೈರಲ್ ಮಾಡಿದ್ದರು. ಈ ವಿಡಿಯೋ ಮುಸ್ಲಿಂ ಸಮಾಜದ ಭಾವನೆಗಳಿಗೆ ದಕ್ಕೆ ತರುವಂತೆ ಚಿತ್ರಿಕರಿಸಿದ್ದರಿಂದ ನಗರದಲ್ಲಿ ಅಶಾಂತಿ ಕದಡುವ, ಕೋಮು ಭಾವನೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿರುವ ಇಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದಾದಾಪೀರ್ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಕೈಗೊಳ್ಳಲಾಗಿರುತ್ತದೆ.

ಸಾರ್ವಜನಿಕರ ಗಮನಕ್ಕೆ: ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್ ಗಳು ಇತ್ಯಾದಿ ಅಕ್ಷೇಪರ್ಹ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಮತ್ತು ಶೇರ್ ಮಾಡುವುದು ಕಾನೂನು ಬಾಹಿರವಾಗಿದೆ. ಅಂತ ಪೋಸ್ಟ್ ಗಳನ್ನು ಮಾಡುವಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *