ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ಗಳನ್ನು ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಲು ಫೆ.2 ಕೊನೆ ದಿನವಾಗಿರುತ್ತದೆ.
ರಾಜ್ಯದ ನಿವಾಸಿಯಾಗಿ ಕುಟುಂಬದ ವಾರ್ಷಿಕ ಆದಾಯ ರೂ.2.ಲಕ್ಷಗಳಿಗಿಂತ ಕಡಿಮೆ ಇರಬೇಕು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಪಡೆದಿರಬೇಕು. ದೈಹಿಕ ವಿಕಲಚೇತನರು ಶೇ.75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮಥ್ರ್ಯ ಹೊಂದಿರದ ಹಾಗೂ ಕನಿಷ್ಠ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರವಾಹನ ಪಡೆದಿರಬಾರದು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರ ದಾವಣಗೆರೆ ದೂ.ಸಂ: 08192-263939, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹೊನ್ನಾಳಿ ಶೈಲಜಾ ಕೆ.ಎಂ. ಮೊ.ನಂ: 9886366809, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಗಿರಿ ಕೆ ಸುಬ್ರಮಣ್ಯಂ ಮೊ.ನಂ: 9945738141, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಜಗಳೂರು ಎಂ ಕೆ ಶಿವನಗೌಡ ಮೊ.ಸಂ: 9902105734, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹರಿಹರ ಶಶಿಕಲಾ ಟಿ. ಮೊ.ನಂ: 9945458058, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ದಾವಣಗೆರೆ ಚನ್ನಪ್ಪ. ಬಿ ಮೊ.ಸಂ: 9590829024 ಇವರನ್ನು ಸಂಪರ್ಕಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.



