Connect with us

Dvgsuddi Kannada | online news portal | Kannada news online

11,366 ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರು ಜಾರಿ; ರಾಜ್ಯ ಸರ್ಕಾರ ಮಹತ್ವದ ಘೋಷಣೆ; ಎಲ್ಲಾ ನೌಕರರಿಗೂ ಜಾರಿಗೆ ಸರ್ಕಾರಿ ನೌಕರರ ಸಂಘ ಆಗ್ರಹ

images 2024 01 18T201710.787

ಪ್ರಮುಖ ಸುದ್ದಿ

11,366 ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರು ಜಾರಿ; ರಾಜ್ಯ ಸರ್ಕಾರ ಮಹತ್ವದ ಘೋಷಣೆ; ಎಲ್ಲಾ ನೌಕರರಿಗೂ ಜಾರಿಗೆ ಸರ್ಕಾರಿ ನೌಕರರ ಸಂಘ ಆಗ್ರಹ

ಬೆಂಗಳೂರು: 2006 ಏ.4ಕ್ಕಿಂತ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಿ, ತಾಂತ್ರಿಕ ಕಾರಣಗಳಿಂದ ನೇಮಕಾತಿ ವಿಳಂಬವಾಗಿದ್ದ 11,366 ನೌಕರರನ್ನು ರಾಜ್ಯ ಸರ್ಕಾರ ಮತ್ತೆ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ (Old Pension Scheme) ಸೇರಿಸಿ ಆದೇಶ ಹೊರಡಿಸಿದೆ. ಒಪಿಎಸ್ ಯೋಜನೆಯನ್ನು 2006 ನಂತರ ಸೇರಿದ ಎಲ್ಲಾ ನೌಕರರಿಗೂ ಜಾರಿಗೆ ತರಬೇಕು ಎಂಬುದು ರಾಜ್ಯ ಸರ್ಕಾರಿ ನೌಕರರ ಸಂಘದ ಆಗ್ರಹವಾಗಿತ್ತು. ಆದರೆ, ರಾಜ್ಯ ಸರ್ಕಾರ 11,366 ನೌಕರರನ್ನು ಸೇರಿಸಿ ಆದೇಶಿಸಿದೆ.

ಏ.1, 2006ರಕ್ಕಿಂತ ಮೊದಲು ಸರ್ಕಾರಿ ಹುದ್ದೆಗೆ ಆಯ್ಕೆಯಾಗಿ, ನಂತರ ಇತರೆ ಇಲಾಖೆಯ ಬೇರೆ ಹುದ್ದೆಗಳಿಗೆ ಮರು ಆಯ್ಕೆಯಾದವರೂ ಹಳೇ ಪಿಂಚಣಿ ಯೋಜನೆ ಆಯ್ಕೆ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅವಕಾಶ ನೀಡಿದೆ.ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme) ಜಾರಿಗೂ ಮೊದಲು ಹೊರಡಿಸಿದ್ದ ನೇಮಕಾತಿ ಅಧಿಸೂಚನೆ ಅನ್ವಯ ನೇಮಕಾತಿ ಹೊಂದಿರುವ ನೌಕರರನ್ನು ಒಪಿಎಸ್‌ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ 2023 ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಆದೇಶದಂತೆ ಕ್ರಮ ಕೈಗೊಳ್ಳಲು ರಾಜ್ಯಗಳಿಗೂ ನಿರ್ದೇಶನ ನೀಡಿತ್ತು. ಕೇಂದ್ರದ ಆದೇಶದಂತೆ ಕರ್ನಾಟಕ ಸರ್ಕಾರ ಈಗಾಗಲೇ ಐಎಎಸ್‌ ಶ್ರೇಣಿಯ ಅಧಿಕಾರಿಗಳನ್ನು ಒಪಿಎಸ್‌ ವ್ಯಾಪ್ತಿಗೆ ತಂದಿತ್ತು. ಈಗ ಇತರೆ ನೌಕರರನ್ನೂ ಒಪಿಎಸ್‌ ಯೋಜನೆಗೆ ಒಳಪಡಿಸಿದೆ.

ಹಳೇ ಪಿಂಚಣಿ ಯೋಜನೆಗೆ ಒಳಪಟ್ಟ ನೌಕರರು ಜೂನ್‌ 30ರ ಒಳಗೆ ನೇಮಕಾತಿ ಪ್ರಾಧಿಕಾರಕ್ಕೆ ತಮ್ಮ ಅಭಿಪ್ರಾಯ ಸಲ್ಲಿಸಬೇಕು. ಎರಡು ಪಿಂಚಣಿ ಯೋಜನೆಯಲ್ಲಿ ತಾವು ಇಚ್ಚಿಸಿದ ಯೋಜನೆ ಆಯ್ಕೆ ಮಾಡಿಕೊಳ್ಳಬಹುದು. ಆಯ್ಕೆಯ ಅಭಿಪ್ರಾಯ ಸಲ್ಲಿಸದವರು ಈಗ ಇರುವ ಎನ್‌ಪಿಎಸ್‌ನಲ್ಲೇ ಮುಂದುವರಿಯುತ್ತಾರೆ. ಇಲಾಖಾ ಮುಖ್ಯಸ್ಥರು ಅರ್ಹ ನೌಕರರ ಪಟ್ಟಿಯನ್ನು ಆ.31ರ ಒಳಗೆ ಆರ್ಥಿಕ ಇಲಾಖೆಯ ಅನುಮೋದನೆಗೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಎಲ್ಲ ಸರ್ಕಾರಿ ನೌಕರರನ್ನೂ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ ತರಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಆಗ್ರಹಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top