ದಾವಣಗೆರೆ: ಪತ್ನಿಯನ್ನೇ ಕೊಲೆ ಮಾಡಿ ಮೃತದೇಹ ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ಪತಿ….!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ಘಟನೆ ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಅಕ್ರಮ ಸಂಬಂಧಕ್ಕೆ ಪತ್ನಿ ಅಡ್ಡಿಯಾಗಿದ್ದರಿಂದ ಕೊಲೆ ಮಾಡಿ ಕೆರೆಗೆ ಎಸೆದಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.

ಕಾವ್ಯ (22) ಕೊಲೆಯಾದ ಗೃಹಿಣಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ. ಐದು ವರ್ಷಗಳ ಹಿಂದೆ ಸಾಸಲುಹಳ್ಳ ಗ್ರಾಮದ ಕಾವ್ಯಳನ್ನು ಸಚಿನ್ ಮದುವೆಯಾಗಿದ್ದನು. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡಿದ್ದ ಸಚಿನ್, ಕಾವ್ಯಾಳನ್ನು ಮದುವೆಯಾಗಿದ್ದನು.

ಈ ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ಕಾವ್ಯಾಳ ಮೃತದೇಹವನ್ನು ತುಂಬಿ ಕೊಡಗನೂರು ಕೆರೆಗೆ ಹಾಕಿದ್ದರು. ಹತ್ತು ದಿನಗಳ ಹಿಂದೆ ನಡೆದ ಈ ಕೊಲೆ ಈಗ ಬೆಳಕಿಗೆ ಬಂದಿದ್ದು, ಪೊಲೀಸರು ಸಮ್ಮುಖದಲ್ಲಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆಯಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *