ಮಿಣಿ ಮಿಣಿ ಪೌಡರ್ ವೈರಲ್ ಹಿಂದೆ ವಿಕೃತಿ ಮನಸ್ಥಿತಿ: ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ರಾಮನಗರ: ಮಂಗಳೂರು ಬಾಂಬ್ ಪತ್ತೆ ಪ್ರಕರಣದಲ್ಲಿ ನಾನು ಹೇಳಿದ ಮಿಣಿ ಮಿಣಿ ಪೌಡರ್ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಕೆಲವರು ಸಾಮಾಜಿಕ‌ ಜಾಲತಾಣದಲ್ಲಿ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ ಕಾರ್ಯಕರ್ತರ ವಿಕೃತಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದುಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,  ದೊಡ್ಡ‌ ಕಂಟೈನರ್‌ನಲ್ಲಿ ಬಾಂಬ್ ಇದೆ. ಸಾವಿರಾರು ಜನ ಸಾಯುತ್ತಾರೆ ಎಂದಿದ್ದರು. ಒಂದು ಸಮಾಜದ ಬಗ್ಗೆ ದೋಷ ತೋರಿಸಬೇಕು ಎನ್ನುವುದು ಅವರ ಮನಸ್ಸಿನಲ್ಲಿ ಇತ್ತು.ಈಗ ಅದು ಸಾಧ್ಯವಾಗಿಲ್ಲ. ಹೀಗಾಗಿ ಅದನ್ನು ಮುಚ್ಚಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಈ ಕಥೆ ಕಟ್ಟುತ್ತಿ ಜನರ ದಾರಿ ತಪ್ಪಿಸುತ್ತಿದ್ದಾರೆ.

ಬಾಂಬ್ ಪ್ರಕರಣದಲ್ಲಿ ಮಾಧ್ಯಮಗಳ ವರದಿ ಆಧರಿಸಿ ಪಟಾಕಿ ಪೌಡರ್ ಕುರಿತು ನಾನು ಹೇಳಿದ್ದೆ.   ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳೂ ಮಾಧ್ಯಮಗಳ ದಾರಿ ತಪ್ಪಿಸಿದರು. ನಾನು ಕಥೆ ಕಟ್ಟಿ ಹೇಳುತ್ತಿಲ್ಲ. ಮಾಧ್ಯಮ ವರದಿ ಆಧರಿಸಿ ಹೇಳಿಕೆ ಕೊಟ್ಟಿದ್ದೇನೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *