ಚಿತ್ರದುರ್ಗ: ಬಿರು ಬಿಸಿಲಿಗೆ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ 800ಕ್ಕೂ ಅಡಿಕೆ ಗಿಡ ಸುಟ್ಟು ಭಸ್ಮವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದ ರೈತ ಈರಣ್ಣ ಅವರ ಅಡಿಕೆ ತೋಟಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು 800ಕ್ಕೂ ಹೆಚ್ಚು ಗಿಡಗಳು ಬೆಂಕಿಗೆ ಆಹುತಿಯಾಗಿವೆ. ಈಗ ಬೇಸಿಗೆ ಕಾಲವಾಗಿದ್ದರಿಂದ ಬೆಂಕಿ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಅಡಿಕೆಗೆ ನೀರು ಹಾಯಿಸುವ ಡ್ರಿಪ್ ಪೈಪ್ ಸಹಿತ ಅಡಿಕೆ ಗಿಡಗಳು ಸುಟ್ಟು ಹೋಗಿವೆ. ರೈತ ಈರಣ್ಣ ಕಂಗಾಲಾಗಿದ್ದು, ರೈತನ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.
ಆಕಸ್ಮಿಕ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ .ರೈತ ಈರಣ್ಣ ತನ್ನ ಜಮೀನಿನಲ್ಲಿ 10ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರಸಿದ್ದರು. ಆದರೆ ಕೊಳವೆ ಬಾವಿಯಲ್ಲಿ ನೀರು ಅಷ್ಟಕಷ್ಟೆ ಬರುತಿತ್ತು. ಆದರೂ ಸಹ ಪಕ್ಕದ ಜಮೀನಿನ ನೀರು ಹಾಯಿಸಿಕೊಂಡು ಅಡಿಕೆ ಸಸಿಗಳನ್ನು ಬದುಕಿಸಿದ್ದರು. ಆದರೆ ಇದೀಗ ಅದೇ ಅಡಿಕೆ ಗಿಡಗಳಿಗೆ ಬೆಂಕಿ ಬಿದ್ದಿದೆ.ಇನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತನ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.



