Connect with us

Dvgsuddi Kannada | online news portal | Kannada news online

ದಾವಣಗೆರೆ: ತಡ ರಾತ್ರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ಆರೋಪಿಗಳಿಂದ ಸ್ವತ್ತು ವಶ

IMG 20240129 213557

ದಾವಣಗೆರೆ

ದಾವಣಗೆರೆ: ತಡ ರಾತ್ರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ಆರೋಪಿಗಳಿಂದ ಸ್ವತ್ತು ವಶ

ದಾವಣಗೆರೆ: ತಡ ರಾತ್ರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಗಳಿಂದ ಸ್ವತ್ತು ವಶಕ್ಕೆ ಪಡೆಯಲಾಗಿದೆ.

ಮಂಜುನಾಥ ಸಿಂಗ್ ಎಂಬುವವರು ಕೆಟಿಜೆ ನಗರ ಠಾಣೆಗೆ ಹಾಜರಾಗಿ ತಾನು ಆರ್ ಎಮ್ ಸಿ ಫೈಓವರ್ ಕೆಳಗಿನ ಸರ್ವಿಸ್ ರಸ್ತೆಯಲ್ಲಿ ಭರತ್ ಆಟೋ ಮೊಬೈಲ್ಸ್ & ಲುಬ್ರಿ ಕೆಂಟ್ಸ್ ಅಂಗಡಿಯನ್ನು ನಡೆಸುತ್ತಿದ್ದು, ಜ.26 ರಂದು ರಾತ್ರಿ ಸುಮಾರು 9.00 ಗಂಟೆ ಸಮಯದಲ್ಲಿ ತಮ್ಮ ಅಂಗಡಿಯ ಬಾಗಿಲು ಹಾಕಿಕೊಂಡು ಮನೆಗೆ ಹೋಗಿದ್ದು,ನಂತರ ಬೆಳಿಗ್ಗೆ 7.00 ಗಂಟೆಗೆ ಬಂದು ನೋಡಿದಾಗ ಯಾರೋ ಕಳ್ಳರು ಅಂಗಡಿಯ
ಮೇಲ್ದಾವಣಿಯಿಂದ ಇಳಿದು ಅಂಗಡಿಯಲ್ಲಿದ್ದ 40 ಸಾವಿರ ರೂ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಆರೋಪಿ ಪತ್ತೆ ಮಾಡಿಕೊಡಿ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಕೇಸಿನಲ್ಲಿ ಆರೋಪಿತರನ್ನು ಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ ಸಂತೋಷ, ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ ಜಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಹಾಗೂ ಕೆಟಿಜೆ ನಗರ
ನಿರೀಕ್ಷಕ ಶಶಿಧರ ಯು ಜೆ, ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುಳಾ ಜಿ ಎ ಹಾಗೂ ಪಿಎಸ್‌ಐ ಸಾಗರ ಅತ್ತರವಾಲಾ & ಸಿಬ್ಬಂದಿಗಳಾದ ಶಂಕರ್ ಜಾದವ್, ಪ್ರಕಾಶ ಟಿ, ಷಣ್ಮುಖ ಕೆ, ಎಮ್ ಮಂಜಪ್ಪ, ಶಿವರಾಜ್ ಎಮ್ ಎಸ್, ಸತೀಶ ರವರಗಳನ್ನು ಒಳಗೊಂಡ ತಂಡವು ಆರೋಪಿತರಾದ 1) ಅಜಯ ವಿ @ ಕಳ್ಳ ಅಜಯ, ನಿಟ್ಟುವಳ್ಳಿ, ದಾವಣಗೆರೆ, 2) ಚಂದ್ರು @ ಆಯಿಲ್ ಚಂದ್ರ, ವಾಸ ನಿಟ್ಟುವಳ್ಳಿ, ದಾವಣಗೆರೆ ರವರನ್ನು ಬಂಧಿಸಿದ್ದಾರೆ.

ಆರೋಪಿತರಿಂದ ಒಟ್ಟು 32,600/-ರೂ ನಗದು ಹಣವನ್ನು ಹಾಗು ಕೃತ್ಯಕ್ಕೆ ಉಪಯೋಗಿಸಿದ 1,80,000/- ರೂ ಬೆಲೆಯ ಒಂದು ಆಟೋ ಹಾಗೂ ಒಂದು ಹೊಂಡಾ ಆಕ್ಟಿವಾ ಸ್ಕೂಟರ್‌ನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಕೆಟಿಜೆ ನಗರ ಪೊಲೀಸ್ ಠಾಣೆಯ 02 ಪ್ರಕರಣ ಹಾಗೂ ವಿದ್ಯಾ ನಗರ ಠಾಣೆಯ 01 ಪ್ರಕರಣ ಒಟ್ಟು 03 ಪ್ರಕರಣಗಳು ಪತ್ತೆಯಾಗಿವೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್  ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top